22.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಮಳೆಯ ತೀವ್ರತೆ ಕಡಿಯಾಗಲಿದ್ದು, ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಂತಹ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ.ತೀವ್ರ ಉಷ್ಣಾಂಶ ಏರಿಕೆಯಿಂದಾಗಿ ಪರಿಸ್ಥಿತಿ ಬದಲಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…