Advertisement
ಸುದ್ದಿಗಳು

Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |

Share

24.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಹಾಗೂ ಶಿವಮೊಗ್ಗ – ಉತ್ತರ ಕನ್ನಡ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ( ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ)

ಕೊಡಗು ಅಲ್ಲಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಉಳಿದ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಈಗಿನಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

29 minutes ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

48 minutes ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

57 minutes ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

11 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

17 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

17 hours ago