12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚನೆ ಇದೆ. (ಚಾರ್ಮಾಡಿ, ಆಗುಂಬೆ ಶೃಂಗೇರಿ, ಕೊಡಗು ಭಾಗಗಳಲ್ಲಿ 3.30 PM ಮುಂಚೆ ಮಳೆ ಆರಂಭವಾದರೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆ ಹೆಚ್ಚಿದೆ.) ಉತ್ತರ ಕನ್ನಡ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ (ಸಕಲೇಶಪುರ ಸುತ್ತಮುತ್ತ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…