Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

May 18, 2024
1:02 PM
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್‌  ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂಗಾರು ಮುಂದುವರಿಕೆಯು ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ
ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror