Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

May 18, 2024
1:02 PM
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್‌  ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂಗಾರು ಮುಂದುವರಿಕೆಯು ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror