Advertisement
ವೆದರ್ ಮಿರರ್

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

Share

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಚಲನೆಯ ದಿಕ್ಕು ನಿಖರತೆ ಇಲ್ಲದಿರುವುದರಿಂದ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಎಲ್ಲಾ ಕಡೆ ಮಳೆಯಾಗುತ್ತಿಲ್ಲ. ಸುಳ್ಯ ತಾಲೂಕಿನ ಪೂರ್ವ ಭಾಗ ಹಾಗೂ ದಕ್ಷಿಣ ಭಾಗದಲ್ಲಿ ಘಟ್ಟ ಪ್ರದೇಶವಾದ್ದರಿಂದ ಹೆಚ್ಚು ಮಳೆಯಾಗುತ್ತಿದೆ. ಉತ್ತರ ಕನ್ನಡದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಮುಂಗಾರು ಮಾರುತಗಳು ಪ್ರಭಲವಾಗಿ ಅಂಡಮಾನ್‌  ಕಡೆ ಚಲಿಸಲು ಆರಂಭವಾಗಿದ್ದು, ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು ಮೇ 25 ಅಥವಾ 26ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಮುಂಗಾರು ಮುಂದುವರಿಕೆಯು ಈ ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಅವಲಂಬಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರೀ ಮಳೆ | ಜು 6 ರಂದು ದ ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ |

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

5 hours ago

ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು…

15 hours ago

ಗ್ರಾಮೀಣ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿ ಕೊಡುಗೆ |

ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ  ರಾಮಚಂದ್ರ…

15 hours ago

ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….

ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ,‌ ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ,…

17 hours ago

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು…

17 hours ago

ಸಹಜ ಕೃಷಿಯತ್ತ ರೈತರ ಚಿತ್ತ | ಚಾಮರಾಜನಗರ ಜಿಲ್ಲೆಯಲ್ಲಿ ಸಹಜ ಕೃಷಿಯನ್ನು ಅಳವಡಿಸಲು ರೈತರಿಗೆ ನೆರವು ನೀಡಲು ಕಾರ್ಯ ಯೋಜನೆ |

ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು…

17 hours ago