Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |

May 20, 2024
11:16 AM
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

21.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡಬಿದರೆ, ಬೆಳ್ತಂಗಡಿ, ಉಡುಪಿಯ ಕಾರ್ಕಳ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಉಂಟಾಗಲಿದೆ).

Advertisement

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ). ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ದಕ್ಷಿಣ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಉತ್ತರ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬಳ್ಳಾರಿ, ಧಾರವಾಡ, ಬೆಳಗಾವಿ, ಗದಗ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೇ 22 ರಿಂದ ಬಂಗಾಳಕೊಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಮೇ 25 ಅಥವಾ 26 ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ
October 22, 2024
12:34 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |
October 22, 2024
7:29 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |
October 22, 2024
7:13 AM
by: The Rural Mirror ಸುದ್ದಿಜಾಲ
 ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |
October 22, 2024
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror