Karnataka Weather | 08.06.2024 | ಹಲವು ಕಡೆ ಮಳೆ ನಿರೀಕ್ಷೆ | ಕೆಲವು ಕಡೆ ಭಾರೀ ಮಳೆ ಸಾಧ್ಯತೆ | ಜೂ. 10ರಿಂದ ಮಳೆ ಕ್ಷೀಣ

June 8, 2024
12:13 PM

09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದ ತಾಲ್ಲೂಕುಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ ಉತ್ತರ ಭಾಗ, ದಾವಣಗೆರೆ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುನಿಮ್ನತೆ (ಕಡಿಮೆ ಒತ್ತಡ) ಉಂಟಾಗಿದ್ದು, ಮುಂಗಾರು ಮಾರುತಗಳು ಗೋವಾ ಕರಾವಳಿ ಮೂಲಕ ಕೇಂದ್ರಿತವಾಗಿ ಸಾಗುತ್ತಿದೆ. ಈ ವಾಯುನಿಮ್ನತೆಯು ಮತ್ತಷ್ಟು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಜೂ. 10ರಿಂದ ಮಳೆ ಕ್ಷೀಣಿಸಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror