Advertisement
ವೆದರ್ ಮಿರರ್

Karnataka Weather | 08.06.2024 | ಹಲವು ಕಡೆ ಮಳೆ ನಿರೀಕ್ಷೆ | ಕೆಲವು ಕಡೆ ಭಾರೀ ಮಳೆ ಸಾಧ್ಯತೆ | ಜೂ. 10ರಿಂದ ಮಳೆ ಕ್ಷೀಣ

Share

09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದ ತಾಲ್ಲೂಕುಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ ಉತ್ತರ ಭಾಗ, ದಾವಣಗೆರೆ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೀದರ್ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ವಾಯುನಿಮ್ನತೆ (ಕಡಿಮೆ ಒತ್ತಡ) ಉಂಟಾಗಿದ್ದು, ಮುಂಗಾರು ಮಾರುತಗಳು ಗೋವಾ ಕರಾವಳಿ ಮೂಲಕ ಕೇಂದ್ರಿತವಾಗಿ ಸಾಗುತ್ತಿದೆ. ಈ ವಾಯುನಿಮ್ನತೆಯು ಮತ್ತಷ್ಟು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಜೂ. 10ರಿಂದ ಮಳೆ ಕ್ಷೀಣಿಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

27 minutes ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

33 minutes ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

7 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

8 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

8 hours ago