ಹವಾಮಾನ ವರದಿ | 02-11-2024 | ಕೆಲವು ಕಡೆ ಸಂಜೆಯ ವೇಳೆ ಮಳೆ ಸಾಧ್ಯತೆ | ನ.9 ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣ |

November 2, 2024
12:51 PM
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

03.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 5ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗಿನ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಗಡಿಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ನವೆಂಬರ್ 9 ಅಥವಾ 10ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ನವೆಂಬರ್ 4ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಈ ತಿರುಗುವಿಕೆಯು ತಮಿಳುನಾಡು ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಗಳಿವೆ. ನವೆಂಬರ್ 9ರ ಸುಮಾರಿಗೆ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |
May 1, 2025
1:42 PM
by: ಸಾಯಿಶೇಖರ್ ಕರಿಕಳ
ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ
May 1, 2025
7:55 AM
by: The Rural Mirror ಸುದ್ದಿಜಾಲ
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |
May 1, 2025
7:38 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group