ಹವಾಮಾನ ವರದಿ | 03.11.2024 | ಸಾಮಾನ್ಯ ಮಳೆ ಮುಂದುವರಿಕೆ | ನ.9 ರಿಂದ ಮತ್ತೆ ಮಳೆ ಚುರುಕಾಗುವ ಸಾಧ್ಯತೆ |

November 3, 2024
1:47 PM
ನ. 5ರಿಂದ ಹಿಂಗಾರು ಮಳೆಯ ಕಡಿಮೆಯಾಗಲಿದ್ದು, ನ.8 ಅಥವಾ 9ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿವೆ.

04.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಜಿಲ್ಲೆಯ ಉತ್ತರ ಕನ್ನಡ – ಗೋವಾ ಗಡಿಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನ. 5ರಿಂದ ಹಿಂಗಾರು ಮಳೆಯ ಕಡಿಮೆಯಾಗಲಿದ್ದು, ನ.8 ಅಥವಾ 9ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿವೆ.

ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ನ. 5ರಿಂದ 7ರ ತನಕ ಮಳೆ ಕಡಿಮೆಯಾಗಲಿದ್ದು, 8 ಅಥವಾ 9ರಿಂದ ಹಿಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ, ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನ.5ರಿಂದ ಬಿಡುವು ಪಡೆವ ಹಿಂಗಾರು ನ. 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಇದು ಆ ಕಡೆ ಚಲಿಸುತ್ತಿದ್ದಂತಯೇ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು ನ.8ರ ಸುಮಾರಿಗೆ ಉತ್ತರ ಶ್ರೀಲಂಕಾ ಕರಾವಳಿ ಸಮೀಪ ತಲಪುವ ನಿರೀಕ್ಷೆಯಿದೆ. ಇವುಗಳ ಒಟ್ಟು ಪರಿಣಾಮ ನ.5ರಿಂದ ಹಿಂಗಾರು ದುರ್ಬಲಗೊಂಡು, ನ. 8ರಿಂದ ಮತ್ತೆ ಚುರುಕಾಗುವ ಸೂಚನೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror