ಹವಾಮಾನ ವರದಿ | 09.12.2024 | ರಾಜ್ಯದ ಕೆಲವು ಕಡೆ ಇಂದೂ ಮಳೆ ಸಾಧ್ಯತೆ | ಡಿ.13 ರವರೆಗೂ ಮಳೆ ನಿರೀಕ್ಷೆ |

December 9, 2024
11:25 AM
ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿ. 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.

10.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಡಿ. 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿ. 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.

ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಡಿ 10 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12 ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 13 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.

ಈಗಿನಂತೆ ಡಿ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿ. 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿ. 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror