10.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಡಿ. 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿ. 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.
ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿ 10 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12 ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 13 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿ. 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿ. 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…