ಸುದ್ದಿಗಳು

ಹವಾಮಾನ ವರದಿ | 09.12.2024 | ರಾಜ್ಯದ ಕೆಲವು ಕಡೆ ಇಂದೂ ಮಳೆ ಸಾಧ್ಯತೆ | ಡಿ.13 ರವರೆಗೂ ಮಳೆ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

10.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಡಿ. 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿ. 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.

ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಡಿ 10 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12 ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 13 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.

ಈಗಿನಂತೆ ಡಿ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿ. 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿ. 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

1 hour ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

8 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

15 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago