ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚು ಅನುಭವವಾಗುತ್ತಿದೆ. ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಮುಂಜಾನೆ ಕೆಲವೆಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 15 ನಂತರ ಮಳೆ ಆರಂಭವಾಗುವ ಸೂಚನೆ ಇದೆ.
ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ರಾತ್ರಿ ಅಥವಾ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು, ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಇರಲಿದೆ. ಕೊಡಗು ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಏಪ್ರಿಲ್ 15ರವರೆಗೆ ಮಳೆಯ ಸಾಧ್ಯತೆ ಕಡಿಮೆ, ನಂತರ ಹೆಚ್ಚಾಗುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯೊಂದಿಗೆ ತಾಪಮಾನ ಹೆಚ್ಚಾಗಿ ಮುಂದುವರಿಯಲಿದೆ. ಮಳೆಯ ಯಾವುದೇ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಮೈಸೂರು, ಚಾಮರಾಜನಗರ, ಮಂಡ್ಯ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಬಹುದು. ಪ್ರಸ್ತುತ ಪರಿಸ್ಥಿತಿಯಲ್ಲಿ ಏಪ್ರಿಲ್ 25ರವರೆಗೆ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…