ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

April 11, 2026
1:52 PM
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15 ನಂತರ ಮಳೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹವಾಮಾನದಲ್ಲಿ ಹಂತ ಹಂತವಾಗಿ ಬದಲಾವಣೆ ಕಾಣುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಚಟುವಟಿಕೆ ಆರಂಭವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ :  ಕಾಸರಗೋಡು ಜಿಲ್ಲೆಯಲ್ಲಿ ಮೋಡ ಹಾಗೂ ಅಧಿಕ ತಾಪಮಾನವಿದ್ದು, ಸಂಜೆ ಮತ್ತು ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಕವಿದ ವಾತಾವರಣವಿದ್ದು, ಘಟ್ಟದ ಕೆಳಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.

ಮಲೆನಾಡು :  ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಸಮೀಪ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಕಂಡುಬರಬಹುದು.
ಶಿವಮೊಗ್ಗ ಸೇರಿ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

 ಉತ್ತರ ಒಳನಾಡು:  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ಅಧಿಕ ತಾಪಮಾನ ಮುಂದುವರಿಯಲಿದೆ.
ಆದರೆ ಏಪ್ರಿಲ್ 17ರಿಂದ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಗಾಳಿಯ ಒತ್ತಡ ಹೆಚ್ಚಾದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಭಾಗದಿಂದ ಗಾಳಿಯ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆ,  ಏಪ್ರಿಲ್ 15 ನಂತರ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಇದೆ,  ಮಳೆ ವ್ಯಾಪ್ತಿ ಉತ್ತರ ಒಳನಾಡಿನತ್ತವೂ ವಿಸ್ತರಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is witnessing gradual weather changes with rainfall activity beginning in coastal and southern interior regions. While northern interior districts continue to experience high temperatures, rainfall is expected to expand across the state after April 15 due to strengthening winds from the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror