Advertisement
ಹವಾಮಾನ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

Share

ರಾಜ್ಯದಲ್ಲಿ ಹವಾಮಾನದಲ್ಲಿ ಹಂತ ಹಂತವಾಗಿ ಬದಲಾವಣೆ ಕಾಣುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಚಟುವಟಿಕೆ ಆರಂಭವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ :  ಕಾಸರಗೋಡು ಜಿಲ್ಲೆಯಲ್ಲಿ ಮೋಡ ಹಾಗೂ ಅಧಿಕ ತಾಪಮಾನವಿದ್ದು, ಸಂಜೆ ಮತ್ತು ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಕವಿದ ವಾತಾವರಣವಿದ್ದು, ಘಟ್ಟದ ಕೆಳಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡ ಮಿಶ್ರ ವಾತಾವರಣ ಮುಂದುವರಿಯಲಿದೆ.

ಮಲೆನಾಡು :  ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಸಮೀಪ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಕಂಡುಬರಬಹುದು.
ಶಿವಮೊಗ್ಗ ಸೇರಿ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

 ಉತ್ತರ ಒಳನಾಡು:  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ಅಧಿಕ ತಾಪಮಾನ ಮುಂದುವರಿಯಲಿದೆ.
ಆದರೆ ಏಪ್ರಿಲ್ 17ರಿಂದ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಗಾಳಿಯ ಒತ್ತಡ ಹೆಚ್ಚಾದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಭಾಗದಿಂದ ಗಾಳಿಯ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆ,  ಏಪ್ರಿಲ್ 15 ನಂತರ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಇದೆ,  ಮಳೆ ವ್ಯಾಪ್ತಿ ಉತ್ತರ ಒಳನಾಡಿನತ್ತವೂ ವಿಸ್ತರಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is witnessing gradual weather changes with rainfall activity beginning in coastal and southern interior regions. While northern interior districts continue to experience high temperatures, rainfall is expected to expand across the state after April 15 due to strengthening winds from the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

15 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago