Advertisement
ವೆದರ್ ಮಿರರ್

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

Share

13.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು :  ರಾಜ್ಯದ ಕರಾವಳಿ ಭಾಗಗಳಲ್ಲಿ ಇವತ್ತು ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಧಿಕ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ವಿಪರೀತ ಸೆಖೆಯಿಂದಾಗಿ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಕಂಡುಬರುತ್ತಿದೆ. ಎಪ್ರಿಲ್ 15ರ ನಂತರ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

 ಮಲೆನಾಡು ಜಿಲ್ಲೆಗಳು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ವೇಳೆಯಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಎಪ್ರಿಲ್ 15ರ ನಂತರ ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.

ಉತ್ತರ ಒಳನಾಡು :  ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆಯ ಪರಿಸ್ಥಿತಿ ಮುಂದುವರಿಯಲಿದೆ.  ಎಪ್ರಿಲ್ 18ರಿಂದ ಈ ಭಾಗಗಳಲ್ಲಿ ಗುಡುಗು ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

 ದಕ್ಷಿಣ ಒಳನಾಡು :   ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ.
ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.  ಎಪ್ರಿಲ್ 15ರ ನಂತರ ಗುಡುಗು ಸಹಿತ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹಿಂದೂ ಮಹಾಸಾಗರದಲ್ಲಿ ಮುಂಗಾರು ತನ್ನ ಚಲನವಲನವನ್ನು ಆರಂಭಿಸಿದೆ. ಯಾವುದೇ ವಾಯುಭಾರ ಕುಸಿತಗಳ ಅಡಚಣೆಗಳಿಲ್ಲದಿದ್ದರೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಕಡೆ ಮುಂಗಾರು ಮುಂಚಿತವಾಗಿ ಆಗಮಿಸುವ ಸಾಧ್ಯತೆ ಇದೆ.

Karnataka is expected to experience hot and mostly dry conditions across regions until mid-April, with light scattered showers in coastal and Malnad areas. Thunderstorm activity is likely to begin after April 15 in most parts, while North Interior Karnataka may see rains after April 18. Early monsoon movement has started over the Indian Ocean, indicating a possible early onset over Andaman & Nicobar Islands.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

4 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago