Advertisement
ವೆದರ್ ಮಿರರ್

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

Share

ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಹಂತ ಹಂತವಾಗಿ ಮಳೆಯ ಪ್ರವೇಶವಾಗುವ ಸಾಧ್ಯತೆಗಳಿವೆ.

ಕರಾವಳಿ ಪ್ರದೇಶ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಏಪ್ರಿಲ್ 18 ಅಥವಾ 19 ರಿಂದ ಮಳೆ ಆರಂಭವಾಗುವ ನಿರೀಕ್ಷೆ.

ಮಲೆನಾಡು ಪ್ರದೇಶ :  ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ-ರಾತ್ರಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳು.

ಉತ್ತರ ಒಳನಾಡು :ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ. ಏಪ್ರಿಲ್ 20 ರಿಂದ ಮಳೆ ಆರಂಭವಾಗುವ ಸಾಧ್ಯತೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣ ಕಂಡುಬರಲಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದ ಮೋಡ ಕವಿದ ವಾತಾವರಣ. ಏಪ್ರಿಲ್ 18 ರವರೆಗೆ ಮಳೆಯ ಸಾಧ್ಯತೆ ಕಡಿಮೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಲಹೆ : 2026ರ ಜೂನ್ ತಿಂಗಳಲ್ಲಿ ಎಲ್ನಿನೋ ಆರಂಭವಾಗುವ ಸಾಧ್ಯತೆಗಳು ಹೆಚ್ಚುತ್ತಿದ್ದರೂ, ಮಳೆ ಸಂಪೂರ್ಣ ಕಡಿಮೆಯಾಗುವ ಸೂಚನೆಗಳು ಇಲ್ಲ. ಬಂದ ಮಳೆಯ ನೀರನ್ನು ಸಂಗ್ರಹಿಸುವ ( ಕೃಷಿ ಹೊಂಡಗಳ ಮೂಲಕ) ಯೋಜನೆ ಹಾಕಿಕೊಳ್ಳುವುದು ಉತ್ತಮ. ಇದರಿಂದ ಕೃಷಿಕರಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಬಹುದು. ಇದಕ್ಕೆ ರಾಜ್ಯ ಸರ್ಕಾರದ ಸಹಾಯಧನವೂ ಲಭಿಸುವ ವರದಿಗಳಿವೆ. ಹೀಗಾಗಿ, ಬಂದ ಮಳೆಯ ನೀರನ್ನು ಕೃಷಿ ಹೊಂಡಗಳಲ್ಲಿ ಸಂಗ್ರಹಿಸುವುದು ಉತ್ತಮ. ನೀರಿನ ಸಂರಕ್ಷಣೆ ಕ್ರಮಗಳನ್ನು ಕೈಗೊಳ್ಳಬೇಕು.

Karnataka is experiencing high summer temperatures till April 15, with cloudy conditions in many regions. Rain is expected to begin gradually from April 18–20, starting in Malnad and coastal regions. Farmers are advised to store rainwater due to possible El Niño conditions in June.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

3 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

23 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

24 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago