ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಹಂತ ಹಂತವಾಗಿ ಮಳೆಯ ಪ್ರವೇಶವಾಗುವ ಸಾಧ್ಯತೆಗಳಿವೆ.
ಕರಾವಳಿ ಪ್ರದೇಶ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಏಪ್ರಿಲ್ 18 ಅಥವಾ 19 ರಿಂದ ಮಳೆ ಆರಂಭವಾಗುವ ನಿರೀಕ್ಷೆ.
ಮಲೆನಾಡು ಪ್ರದೇಶ : ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ-ರಾತ್ರಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳು.
ಉತ್ತರ ಒಳನಾಡು :ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ. ಏಪ್ರಿಲ್ 20 ರಿಂದ ಮಳೆ ಆರಂಭವಾಗುವ ಸಾಧ್ಯತೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣ ಕಂಡುಬರಲಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದ ಮೋಡ ಕವಿದ ವಾತಾವರಣ. ಏಪ್ರಿಲ್ 18 ರವರೆಗೆ ಮಳೆಯ ಸಾಧ್ಯತೆ ಕಡಿಮೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸಲಹೆ : 2026ರ ಜೂನ್ ತಿಂಗಳಲ್ಲಿ ಎಲ್ನಿನೋ ಆರಂಭವಾಗುವ ಸಾಧ್ಯತೆಗಳು ಹೆಚ್ಚುತ್ತಿದ್ದರೂ, ಮಳೆ ಸಂಪೂರ್ಣ ಕಡಿಮೆಯಾಗುವ ಸೂಚನೆಗಳು ಇಲ್ಲ. ಬಂದ ಮಳೆಯ ನೀರನ್ನು ಸಂಗ್ರಹಿಸುವ ( ಕೃಷಿ ಹೊಂಡಗಳ ಮೂಲಕ) ಯೋಜನೆ ಹಾಕಿಕೊಳ್ಳುವುದು ಉತ್ತಮ. ಇದರಿಂದ ಕೃಷಿಕರಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಬಹುದು. ಇದಕ್ಕೆ ರಾಜ್ಯ ಸರ್ಕಾರದ ಸಹಾಯಧನವೂ ಲಭಿಸುವ ವರದಿಗಳಿವೆ. ಹೀಗಾಗಿ, ಬಂದ ಮಳೆಯ ನೀರನ್ನು ಕೃಷಿ ಹೊಂಡಗಳಲ್ಲಿ ಸಂಗ್ರಹಿಸುವುದು ಉತ್ತಮ. ನೀರಿನ ಸಂರಕ್ಷಣೆ ಕ್ರಮಗಳನ್ನು ಕೈಗೊಳ್ಳಬೇಕು.
Karnataka is experiencing high summer temperatures till April 15, with cloudy conditions in many regions. Rain is expected to begin gradually from April 18–20, starting in Malnad and coastal regions. Farmers are advised to store rainwater due to possible El Niño conditions in June.
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…