Advertisement
ಸುದ್ದಿಗಳು

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

Share

16.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಬಿಸಿಗಾಳಿಯ ನಡುವೆ ತುಂತುರು ಮಳೆಯ ಸಾಧ್ಯತೆ ಕಂಡುಬರುತ್ತಿದೆ.

ಕರಾವಳಿ ಪ್ರದೇಶ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಭಾರಿ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಘಟ್ಟದ ಕೆಳಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಿದಲ್ಲಿ ಇತರೆ ಭಾಗಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈಗಿನ ಮುನ್ಸೂಚನೆಯಂತೆ ಏಪ್ರಿಲ್ 18 ರಿಂದ ಸಾಮಾನ್ಯ ಮಳೆ ಆರಂಭವಾಗಿ, ಏಪ್ರಿಲ್ 21 ರಿಂದ ಜೋರಾಗುವ ಲಕ್ಷಣಗಳಿವೆ.

ಮಲೆನಾಡು ಪ್ರದೇಶ : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಚಿಕ್ಕಮಗಳೂರು ಜಿಲ್ಲೆಯ ಕರಾವಳಿಗೆ ಹೊಂದಿಕೊಂಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.  ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಅನಿರೀಕ್ಷಿತ ಮಳೆಯಾಗುತ್ತಿದ್ದು, ಈ ಪ್ರವೃತ್ತಿ ಮುಂದುವರಿಯುವ ಸಾಧ್ಯತೆ ಇದೆ. ಏಪ್ರಿಲ್ 18 ರಿಂದ ಮಲೆನಾಡಿನ ಕರಾವಳಿ ಸಂಪರ್ಕ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು : ಧಾರವಾಡ, ಬೆಳಗಾವಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಂಜೆ ವೇಳೆಯಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನದಿಂದ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಏಪ್ರಿಲ್ 19 ಅಥವಾ 20ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು :  ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯುವ ಸಾಧ್ಯತೆ ಇದೆ. ಈಗಾಗಲೇ ಮಳೆಯ ಲಕ್ಷಣಗಳು ಕಡಿಮೆ ಇದ್ದರೂ, ಏಪ್ರಿಲ್ 18ರಿಂದ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇದೆ.

 ಒಟ್ಟಾರೆ, ರಾಜ್ಯದಲ್ಲಿ ಮುಂದಿನ ಎರಡು ದಿನಗಳು ಬಿಸಿಗಾಳಿ ಮುಂದುವರಿದರೂ, ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆಗಳು ಆರಂಭವಾಗುವ ಸೂಚನೆಗಳು ಇದೆ.

The weather forecast for Karnataka indicates scattered drizzles in coastal and Malnad regions, while heat conditions persist across most parts. Rainfall activity is expected to gradually increase from April 18, intensifying further after April 21.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

12 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

15 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

15 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

19 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

19 hours ago