Advertisement
ವೆದರ್ ಮಿರರ್

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

Share

ಕರ್ನಾಟಕ ಹವಾಮಾನ ಮುನ್ಸೂಚನೆ (23.04.2026 ಬೆಳಿಗ್ಗೆ 8 ಗಂಟೆಯವರೆಗೆ)

ರಾಜ್ಯದಲ್ಲಿ ಇತ್ತೀಚೆಗೆ ಕಂಡುಬಂದ ಮಳೆಯ ಚಟುವಟಿಕೆ ಸ್ವಲ್ಪ ಕಡಿಮೆಯಾಗುತ್ತಿರುವ ಲಕ್ಷಣಗಳಿದ್ದು, ಕೆಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಮುಂದುವರಿದಿದೆ. ಆದರೆ ಮುಂದಿನ ದಿನಗಳಲ್ಲಿ ಮಳೆಯ ಹೊಸ ಚಟುವಟಿಕೆ ಆರಂಭವಾಗುವ ಸೂಚನೆಗಳು ಕಾಣಿಸುತ್ತಿವೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನ ದಿನ ಬಿಸಿಲು ಹೆಚ್ಚಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು.
ಮುಂಜಾನೆ ಕೆಲವು ಕಡೆ ಮಳೆಯಾದ ಹಿನ್ನೆಲೆ, ಇಂದಿನ ಮಳೆಯ ಸಾಧ್ಯತೆ ಕಡಿಮೆ.
ಮುಂದಿನ 2 ದಿನಗಳು ಮಳೆ ಕಡಿಮೆ, ಆದರೆ ಏಪ್ರಿಲ್ 25ರಿಂದ ಮಳೆ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

ಮಲೆನಾಡು ಭಾಗ : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕರಾವಳಿ ಸಮೀಪದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.
ಏಪ್ರಿಲ್ 24ರವರೆಗೆ ಮಳೆ ಕಡಿಮೆ, ಆದರೆ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪ್ರಭಾವ ಹೆಚ್ಚಾದರೆ ಇನ್ನೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಆದರೆ ಏಪ್ರಿಲ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡು : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದ್ದು, ಸಂಜೆ ಮತ್ತು ರಾತ್ರಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು. ಏಪ್ರಿಲ್ 26ರಿಂದ ಮಳೆಯ ಆರಂಭವಾಗುವ ಸಾಧ್ಯತೆ ಇದೆ.

 ಹವಾಮಾನ ವ್ಯವಸ್ಥೆ : ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತ (Anti-Cyclonic Circulation) ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಾಣುವ ಸಾಧ್ಯತೆ ಇದೆ.

Karnataka is expected to witness reduced rainfall over the next two days, especially in coastal and Malnad regions. However, rainfall activity is likely to pick up again from April 25 in coastal and Malnad areas, while South Interior Karnataka may see rains from April 26. North Interior regions may experience a gradual decrease in rainfall after April 25. Anti-cyclonic circulation over Arabian Sea and Bay of Bengal may influence upcoming weather patterns.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

7 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

8 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

15 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

23 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago