ಕರ್ನಾಟಕ ಹವಾಮಾನ ಮುನ್ಸೂಚನೆ (23.04.2026 ಬೆಳಿಗ್ಗೆ 8 ಗಂಟೆಯವರೆಗೆ)
ರಾಜ್ಯದಲ್ಲಿ ಇತ್ತೀಚೆಗೆ ಕಂಡುಬಂದ ಮಳೆಯ ಚಟುವಟಿಕೆ ಸ್ವಲ್ಪ ಕಡಿಮೆಯಾಗುತ್ತಿರುವ ಲಕ್ಷಣಗಳಿದ್ದು, ಕೆಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಮುಂದುವರಿದಿದೆ. ಆದರೆ ಮುಂದಿನ ದಿನಗಳಲ್ಲಿ ಮಳೆಯ ಹೊಸ ಚಟುವಟಿಕೆ ಆರಂಭವಾಗುವ ಸೂಚನೆಗಳು ಕಾಣಿಸುತ್ತಿವೆ.
ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನ ದಿನ ಬಿಸಿಲು ಹೆಚ್ಚಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು.
ಮುಂಜಾನೆ ಕೆಲವು ಕಡೆ ಮಳೆಯಾದ ಹಿನ್ನೆಲೆ, ಇಂದಿನ ಮಳೆಯ ಸಾಧ್ಯತೆ ಕಡಿಮೆ.
ಮುಂದಿನ 2 ದಿನಗಳು ಮಳೆ ಕಡಿಮೆ, ಆದರೆ ಏಪ್ರಿಲ್ 25ರಿಂದ ಮಳೆ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.
ಮಲೆನಾಡು ಭಾಗ : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕರಾವಳಿ ಸಮೀಪದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.
ಏಪ್ರಿಲ್ 24ರವರೆಗೆ ಮಳೆ ಕಡಿಮೆ, ಆದರೆ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.
ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪ್ರಭಾವ ಹೆಚ್ಚಾದರೆ ಇನ್ನೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಆದರೆ ಏಪ್ರಿಲ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.
ದಕ್ಷಿಣ ಒಳನಾಡು : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದ್ದು, ಸಂಜೆ ಮತ್ತು ರಾತ್ರಿ ಮೋಡದ ವಾತಾವರಣ ಕಾಣಿಸಿಕೊಳ್ಳಬಹುದು. ಏಪ್ರಿಲ್ 26ರಿಂದ ಮಳೆಯ ಆರಂಭವಾಗುವ ಸಾಧ್ಯತೆ ಇದೆ.
ಹವಾಮಾನ ವ್ಯವಸ್ಥೆ : ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತ (Anti-Cyclonic Circulation) ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಾಣುವ ಸಾಧ್ಯತೆ ಇದೆ.
Karnataka is expected to witness reduced rainfall over the next two days, especially in coastal and Malnad regions. However, rainfall activity is likely to pick up again from April 25 in coastal and Malnad areas, while South Interior Karnataka may see rains from April 26. North Interior regions may experience a gradual decrease in rainfall after April 25. Anti-cyclonic circulation over Arabian Sea and Bay of Bengal may influence upcoming weather patterns.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…