ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

April 2, 2026
1:52 PM
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ.

03.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಮಳೆ ಮತ್ತು ಬಿಸಿಲಿನ ಮಿಶ್ರ ಪರಿಸ್ಥಿತಿ ಕಂಡುಬರುತ್ತಿದೆ.  ರಾಜ್ಯದಲ್ಲಿ ಹವಾಮಾನದಲ್ಲಿ ಮಿಶ್ರ ಸ್ಥಿತಿ ಮುಂದುವರಿದಿದೆ. ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಭಾಗಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗಿದೆ.

ಕರಾವಳಿ ಪ್ರದೇಶ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಆದರೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಭಾಗದಿಂದ ಮಳೆ ಬಂದರೆ ಅದು ಹೆಚ್ಚು ತೀವ್ರವಾಗಿರುವುದಿಲ್ಲ ಮತ್ತು ಗುಡುಗು ಸಾಧ್ಯತೆಯೂ ಕಡಿಮೆ.

ಮಲೆನಾಡು ಪ್ರದೇಶ : ಮಲೆನಾಡು ಜಿಲ್ಲೆಗಳಲ್ಲಿ ಪಶ್ಚಿಮ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಇವತ್ತು ಮಳೆಯ ಸಾಧ್ಯತೆ ಕಡಿಮೆ. ಮೋಡದ ವಾತಾವರಣ ಇದ್ದರೂ ಮಳೆ ನಿರೀಕ್ಷೆಯಿಲ್ಲ.

ಉತ್ತರ ಒಳನಾಡು :  ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗಿದೆ. ಮೋಡದ ವಾತಾವರಣ ಇದ್ದರೂ ಮಳೆಯ ಯಾವುದೇ ಸೂಚನೆ ಇಲ್ಲ.

Karnataka is witnessing a mixed weather pattern. Coastal regions may receive light rainfall, but strong Arabian Sea winds could reduce its intensity. Malnad and South Interior regions are likely to remain mostly dry, while North Interior Karnataka may see isolated light showers with rising heat trends across the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror