ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

April 5, 2026
1:27 PM
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ ಸಾಧ್ಯತೆ.

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಮುನ್ಸೂಚನೆ ಇದೆ.  ಅರಬ್ಬಿ ಸಮುದ್ರದ ಕಡೆಯಿಂದ ಮೇಲ್ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ಕಡಿಮೆ ತೇವಾಂಶ ಹೊಂದಿದ ಗಾಳಿಯ ಬೀಸುವಿಕೆ ಕಾರಣವಾಗಿ ಮಳೆ ಮೋಡಗಳ ರಚನೆ ದುರ್ಬಲಗೊಳ್ಳುತ್ತಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ,  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಸಮಯದಲ್ಲಿ  ಸ್ಥಳೀಯ ಮೋಡಗಳ ಪರಿಣಾಮದಿಂದ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಸಾಧ್ಯತೆ ಇದೆ. ಆದರೆ ಏಪ್ರಿಲ್ 6ರಿಂದ ಮಳೆ ಇನ್ನಷ್ಟು ಕಡಿಮೆಯಾಗಲಿದೆ, ಹಗಲು ಬಿಸಿಲು ಹೆಚ್ಚಾಗಲಿದೆ.

ಮಲೆನಾಡಿನಲ್ಲಿ, ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ , ಚಿಕ್ಕಮಗಳೂರು ಭಾಗಗಳಲ್ಲಿ (ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕುದುರೆಮುಖ) ಸಂಜೆ/ರಾತ್ರಿ ತುಂತುರು ಮಳೆ ಸಾಧ್ಯತೆ ಇದೆ. ಆದರೆ, ಹಾಸನ, ಶಿವಮೊಗ್ಗ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಏಪ್ರಿಲ್ 6ರಿಂದ ಮಳೆ ಕ್ಷೀಣಿಸಿ ಬಿಸಿಲು ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಪ್ರಧಾನ ವಾತಾವರಣ ಕಂಡುಬರಲಿದ್ದು ಸ್ವಲ್ಪ ಮೋಡ ,  ಮಳೆಯ ಸಾಧ್ಯತೆ ಇಲ್ಲದಂತಿದೆ.

ದಕ್ಷಿಣ ಒಳನಾಡಿನಲ್ಲಿ ಮೈಸೂರು, ಚಾಮರಾಜನಗರ ಭಾಗಗಳಲ್ಲಿ  ಸಂಜೆ ವೇಳೆ ಸಾಮಾನ್ಯ ಮಳೆ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು -ಮೋಡದ ವಾತಾವರಣ ಇರಲಿದ್ದು  ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ಬಿಸಿಲು ಹೆಚ್ಚಾಗಲಿದೆ.

ಅರಬ್ಬಿ ಸಮುದ್ರದ ಗಾಳಿ ಹಾಗೂ ಕಡಿಮೆ ತೇವಾಂಶ,  ಪೂರ್ವದ ಮೋಡಗಳು ದುರ್ಬಲವಾಗುತ್ತಿರುವ ಲಕ್ಷಣ ಹಾಗೂ ಬಂಗಾಳಕೊಲ್ಲಿಯ ಗಾಳಿ ಪ್ರಭಲವಾಗದಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ.

 ರೈತರಿಗೆ ಸಲಹೆ

  • ನೀರಿನ ಸಂರಕ್ಷಣೆ ಕ್ರಮ ಕೈಗೊಳ್ಳಿ
  • ಬೆಳೆಗಳಿಗೆ ಅಗತ್ಯವಿರುವ ನೀರಾವರಿ ವ್ಯವಸ್ಥೆ ಪರಿಶೀಲಿಸಿ
  • ಬಿಸಿಲಿನ ಪರಿಣಾಮದಿಂದ ಬೆಳೆ ಒಣಗದಂತೆ ಜಾಗ್ರತೆ ವಹಿಸಿ

Rainfall is expected to reduce across Karnataka from April 6, 2026, with rising temperatures and sunny conditions. Coastal and Malnad regions may receive light showers, while most areas will experience dry weather.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror