Advertisement
ವೆದರ್ ಮಿರರ್

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

Share

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದರೂ, ಆಗಸ್ಟ್ 2 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. 01.08.2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಬಿಟ್ಟು ಬಿಟ್ಟು ಉತ್ತಮ ಮಳೆಯಾಗಲಿದ್ದು, ಬಳಿಕ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಇನ್ನೂ ಎರಡು ದಿನ ಮಳೆ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಯೂ ಇದೆ. ಈಗಿರುವ ವಾತಾವರಣವು ಆಗಸ್ಟ್ 1ರವರೆಗೆ ಮುಂದುವರಿಯಲಿದ್ದು, ಆಗಸ್ಟ್ 2ರಿಂದ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ.

ಮಲೆನಾಡಿನಲ್ಲೂ ಮಳೆ ಮುಂದುವರಿಕೆ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಆದರೆ ಆಗಸ್ಟ್ 2ರಿಂದ ಈ ಭಾಗಗಳಲ್ಲೂ ಮಳೆಯ ಚಟುವಟಿಕೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

ಉತ್ತರ ಒಳನಾಡಿನಲ್ಲಿ ಮಳೆ ಇಳಿಮುಖ : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 1ರಿಂದಲೇ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಗುಜರಾತ್‌ನಲ್ಲಿ ವಾಯುಭಾರ ಕುಸಿತದ ಪರಿಣಾಮ :  ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಗುಜರಾತ್ ತಲುಪಿದ್ದು, ದಕ್ಷಿಣ ಗುಜರಾತ್ ಭಾಗದಲ್ಲಿ ಭಾರೀ ಮಳೆ ಹಾಗೂ ಅನಾಹುತಗಳಿಗೆ ಕಾರಣವಾಗಿದೆ. ಈ ವ್ಯವಸ್ಥೆ ಶಿಥಿಲಗೊಳ್ಳುತ್ತಿದ್ದಂತೆ ಕರ್ನಾಟಕದ ಮೇಲೆ ಅದರ ಪ್ರಭಾವವೂ ಕಡಿಮೆಯಾಗಲಿದ್ದು, ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ.

ಆಗಸ್ಟ್ 4ಕ್ಕೆ ಹೊಸ ಬೆಳವಣಿಗೆ : ಆಗಸ್ಟ್ 4ರ ಸುಮಾರಿಗೆ ಶ್ರೀಲಂಕಾದ ಪೂರ್ವ ಕರಾವಳಿಯ ಸಮೀಪ ಮಧ್ಯಮ ಸ್ತರದಲ್ಲಿ ಹೊಸ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ವ್ಯವಸ್ಥೆ ಬಲಿಷ್ಠವಾದರೆ ಮತ್ತೆ ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದ್ದು, ಅದರ ಬೆಳವಣಿಗೆಯನ್ನು ಮುಂದಿನ ದಿನಗಳಲ್ಲಿ ಗಮನಿಸಬೇಕಿದೆ.

Rain is expected to continue intermittently across Karnataka’s coastal and Malnad districts until August 1, after which monsoon activity is likely to weaken from August 2. A new low-pressure circulation may form near the east coast of Sri Lanka around August 4, which could influence rainfall over southern India.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

10 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago