ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

August 9, 2026
12:36 PM

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ ಸೂಚನೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಮಳೆ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆ.

Advertisement

ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. 10.08.2026ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ 2–3 ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಮಧ್ಯಾಹ್ನದ ನಂತರ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು.

ಸದ್ಯದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಾತ್ರ ಒಂದೆರಡು ಬಾರಿ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಆ. 17 ಅಥವಾ 18ರಿಂದ ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆಯೂ ಇದೆ.

ಮಲೆನಾಡಿನಲ್ಲಿ ಮಳೆ ಇಳಿಕೆ

ಕೊಡಗು, ಹಾಸನದ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಮಳೆಯ ನಡುವಿನ ಬಿಡುವಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ.

ಆ. 11ರಿಂದ ಮಲೆನಾಡಿನಲ್ಲೂ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಹೀಗಾಗಿ ಅಡಿಕೆ, ಕಾಫಿ ಸೇರಿದಂತೆ ತೋಟಗಾರಿಕಾ ಬೆಳೆಗಳ ನಿರ್ವಹಣೆಯಲ್ಲಿ ರೈತರು ಮಳೆಯ ನಡುವಿನ ಒಣ ಅವಧಿಯನ್ನು ಗಮನಿಸಿ ಕೆಲಸಗಳನ್ನು ಕೈಗೊಳ್ಳುವುದು ಸೂಕ್ತ.

ಉತ್ತರ ಒಳನಾಡಿನಲ್ಲೂ ಮಳೆ ಸೀಮಿತ

ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.

ಸದ್ಯದ ಮುನ್ಸೂಚನೆಯಂತೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಹೊರತುಪಡಿಸಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ. ಆ.14ರ ನಂತರ ಈ ಜಿಲ್ಲೆಗಳಲ್ಲೂ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ.

ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರುವ ಸಾಧ್ಯತೆ ಇದೆ.

ಸದ್ಯದ ಮುನ್ಸೂಚನೆಯ ಪ್ರಕಾರ ಮುಂದಿನ 10 ದಿನಗಳಲ್ಲೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಮುಂಗಾರು ಪ್ರಭಲಗೊಳ್ಳುವುದು ಇನ್ನೂ ವಿಳಂಬ?

ಜಪಾನ್‌ ತೀರದಲ್ಲಿ ಉಂಟಾಗಿದ್ದ ಮಹಾ ಚಂಡಮಾರುತ ಶಿಥಿಲಗೊಂಡಿದ್ದರೂ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಸದ್ಯ ಬೀಸುತ್ತಿರುವ ಗಾಳಿಯ ಚಲನೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ಇದರ ಪರಿಣಾಮವಾಗಿ ಮುಂಗಾರು ಮತ್ತೆ ಪ್ರಬಲಗೊಳ್ಳುವ ಪ್ರಕ್ರಿಯೆ ವಿಳಂಬವಾಗಬಹುದು ಅಥವಾ ಇದೇ ರೀತಿಯ ದುರ್ಬಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯೂ ಇದೆ. ಮುಂದಿನ ಕೆಲವು ದಿನಗಳ ಹವಾಮಾನ ವ್ಯವಸ್ಥೆಗಳನ್ನು ಆಧರಿಸಿ ಮಳೆಯ ಸ್ವರೂಪದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಸ್ಥಳೀಯ ಮಳೆ ಮುನ್ಸೂಚನೆಯನ್ನು ಗಮನಿಸುವುದು ಮುಖ್ಯ.

Karnataka is likely to see a gradual reduction in rainfall intensity over the coming days. Heavy rain chances have weakened along the coastal districts, while Malnad is also expected to receive intermittent normal rain with longer dry spells. North Interior Karnataka may see limited rainfall mainly in Belagavi, Dharwad and Haveri, while parts of South Interior Karnataka may continue to receive isolated thunderstorms for the next 10 days. The monsoon may take longer to strengthen as prevailing wind patterns over the Arabian Sea and Bay of Bengal continue.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror