ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

August 11, 2026
9:12 PM
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು, ಆಗಸ್ಟ್ 19ರವರೆಗೆ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ 2–3 ದಿನ ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ಮುಂದಿನ 10 ದಿನಗಳಲ್ಲಿ ಪ್ರಮುಖ ವಾಯುಭಾರ ಕುಸಿತ ಅಥವಾ ತಿರುವಿಕೆ ಉಂಟಾಗುವ ಸಾಧ್ಯತೆ ಕಡಿಮೆ.

12.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Advertisement

ಕರಾವಳಿ ಕರ್ನಾಟಕ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಎರಡು–ಮೂರು ಸಣ್ಣ ಅವಧಿಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಒಂದೆರಡು ಕಡೆ ಮಳೆ ತುಸು ಹೆಚ್ಚಾಗಬಹುದು.

ಮಳೆಯ ನಡುವೆ ಬಿಡುವಿನ ಅವಧಿ ಹೆಚ್ಚಿರುವುದರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ದೊಡ್ಡ ಮಟ್ಟದ ತೊಂದರೆ ಆಗುವ ಸಾಧ್ಯತೆ ಕಡಿಮೆ. ಇದೇ ರೀತಿಯ ವಾತಾವರಣವು ಸದ್ಯದ ಮುನ್ಸೂಚನೆಯಂತೆ ಆಗಸ್ಟ್ 19ರವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಣ್ಣ ಅವಧಿಯ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಇತರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯಾಗಬಹುದು. ಆಗಸ್ಟ್ 12ರಿಂದ ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಸದ್ಯದ ಮುನ್ಸೂಚನೆಯಂತೆ ಮುಂದಿನ 2–3 ದಿನಗಳ ಕಾಲ ಉತ್ತರ ಒಳನಾಡಿನ ವಿವಿಧೆಡೆ ಸಾಮಾನ್ಯ ಮಳೆ ಮುಂದುವರಿಯಬಹುದು.

ದಕ್ಷಿಣ ಒಳನಾಡು :  ಮೈಸೂರು ಜಿಲ್ಲೆಯ ಒಂದೆರಡು ಕಡೆ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಮಳೆಯಾಗಬಹುದು.

ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

 ಮುಂಗಾರು ಸ್ಥಿತಿ : ಮಧ್ಯಪ್ರದೇಶದ ತಿರುವಿಕೆ ಹಾಗೂ ಬಾಂಗ್ಲಾದೇಶ ಕರಾವಳಿಯಲ್ಲಿ ಹೊಸದಾಗಿ ಉಂಟಾಗಿರುವ ತಿರುವಿಕೆಗಳು ಕರ್ನಾಟಕದ ಮುಂಗಾರು ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಸದ್ಯಕ್ಕೆ ಕಾಣಿಸುತ್ತಿಲ್ಲ.

ಮಧ್ಯಮ ಸ್ತರದಲ್ಲಿ ಮಾರುತಗಳು ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಮೂಲಕ ಫೆಸಿಫಿಕ್ ಸಾಗರದತ್ತ ಸಾಗುತ್ತಿವೆ. ಇದರ ಪರಿಣಾಮವಾಗಿ ಮುಂದಿನ ಸುಮಾರು 10 ದಿನಗಳವರೆಗೆ ಬಂಗಾಳಕೊಲ್ಲಿಯಲ್ಲಿ ಹೊಸ ತಿರುವಿಕೆ ಅಥವಾ ವಾಯುಭಾರ ಕುಸಿತದಂತಹ ಪ್ರಮುಖ ವಿದ್ಯಮಾನಗಳು ಉಂಟಾಗುವ ಸಾಧ್ಯತೆ ಕಡಿಮೆ ಎಂದು ಮುನ್ಸೂಚನೆ ಸೂಚಿಸುತ್ತದೆ.

ರೈತರಿಗೆ ಮುಖ್ಯ ಸೂಚನೆ :  ಕರಾವಳಿ ಭಾಗದಲ್ಲಿ ಮಳೆಯ ನಡುವೆ ಬಿಡುವಿನ ಅವಧಿ ಹೆಚ್ಚಿರುವುದರಿಂದ ತೋಟಗಳಲ್ಲಿ ಔಷಧಿ ಸಿಂಪಡಣೆಗೆ ಕೆಲವು ಅವಕಾಶಗಳಿವೆ. ಆದರೆ ಸ್ಥಳೀಯವಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಸಿಂಪಡಣೆಗೂ ಮುನ್ನ ಆಕಾಶದ ಸ್ಥಿತಿ ಮತ್ತು ಮುಂದಿನ ಕೆಲವು ಗಂಟೆಗಳ ಮಳೆಯ ಸಾಧ್ಯತೆಯನ್ನು ಗಮನಿಸುವುದು ಉತ್ತಮ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka is likely to experience a mix of sunshine, cloudy conditions and scattered short-duration normal rainfall over the coming days. Coastal districts may see two to three brief spells of rain daily, while longer dry intervals could provide opportunities for farm spraying. Similar weather conditions may continue along the coast until around August 19. Parts of Malnad and North Interior Karnataka may receive scattered normal rainfall, while most other areas are expected to remain relatively dry with sunshine and clouds. No significant impact from the latest circulations over Madhya Pradesh and the Bangladesh coast is currently expected on Karnataka’s monsoon.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror