Advertisement
ವೆದರ್ ಮಿರರ್

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ಕೆಲವು ದಿನಗಳಲ್ಲಿ ಮಳೆ ಪ್ರಮಾಣದಲ್ಲಿ ಏರಿಳಿತವಾಗಲಿದೆ. ಆಗಸ್ಟ್ 21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ಆಗಸ್ಟ್ 23 ರಿಂದ 25ರವರೆಗೆ ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣ ಕಂಡುಬರುತ್ತಿದೆ.

ಕರಾವಳಿಯಲ್ಲಿ 10 ದಿನ ಮಳೆ ಮುಂದುವರಿಯುವ ಸಾಧ್ಯತೆ :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ನಡುವೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೋಡಗಳ ಚಲನೆ ವಾಯವ್ಯದಿಂದ ಆಗ್ನೇಯದತ್ತ ಇರುವ ಹಿನ್ನೆಲೆಯಲ್ಲಿ ಸುಳ್ಯ ಮತ್ತು ಕಡಬ ತಾಲ್ಲೂಕುಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ.  ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ ಸುತ್ತಮುತ್ತ ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡದಲ್ಲಿಯೂ ಬಿಸಿಲು ಮತ್ತು ಮೋಡದ ನಡುವೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಬಾರಿ ಮಳೆ ಮುಂದುವರಿಯುವ ಲಕ್ಷಣ ಇದೆ. ಆದರೆ ಆಗಸ್ಟ್ 23ರಿಂದ 25ರವರೆಗೆ ಮಳೆ ಸ್ವಲ್ಪ ಹೆಚ್ಚಾಗಬಹುದು.

 ಮಲೆನಾಡಿನಲ್ಲಿ ಕರಾವಳಿ ಭಾಗಕ್ಕೆ ಹೊಂದಿಕೊಂಡ ಪ್ರದೇಶಗಳಿಗೆ ಮಳೆ : ಕೊಡಗು ಜಿಲ್ಲೆಯಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಡಿಕೇರಿ, ಭಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಆಗಸ್ಟ್ 25ರವರೆಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಇರಬಹುದು.

ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ : ಉತ್ತರ ಒಳನಾಡಿನಲ್ಲಿ ಸದ್ಯ ಮಳೆ ಪ್ರಮಾಣ ಕಡಿಮೆಯಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಆಗಸ್ಟ್ 23ರಿಂದ 25ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

 ದಕ್ಷಿಣ ಒಳನಾಡಿನಲ್ಲಿ ಆ.21ರಿಂದ ಮಳೆ ಇಳಿಕೆ : ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಈಗಾಗಲೇ ಮಳೆಯಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.

ಆಗಸ್ಟ್ 21ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದರೂ ಆಗಸ್ಟ್ 23ರಿಂದ 25ರವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಭಾರತದ ಮಳೆ ವ್ಯವಸ್ಥೆ ದುರ್ಬಲವಾಗುವ ಸಾಧ್ಯತೆ : ಉತ್ತರ ಭಾರತದ ತಿರುವಿಕೆಯ ಪರಿಣಾಮವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸಗಡ ರಾಜ್ಯಗಳಲ್ಲಿ ಉತ್ತಮ ಮಳೆಯಾಗಿದೆ. ಆದರೆ ಈ ವ್ಯವಸ್ಥೆ ಮುಂದಿನ ಎರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

ರೈತರಿಗೆ ಮುಖ್ಯವಾದ ಮುನ್ಸೂಚನೆ :  ಕರಾವಳಿ ಮತ್ತು ಮಲೆನಾಡಿನ ತೋಟ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ತೇವಾಂಶವನ್ನು ಗಮನಿಸುವುದು ಮುಖ್ಯ. ವಿಶೇಷವಾಗಿ ಆಗಸ್ಟ್ 23–25ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೋಗಬಾಧಿತ ತೋಟಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಮಳೆ ಬಿಡುವ ಸಮಯವನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಯೋಜಿಸುವುದು ಸೂಕ್ತ.

ಕರಾವಳಿಗೆ ಮಳೆ ವಿರಾಮ ಸಿಗುವ ಲಕ್ಷಣ ಸದ್ಯ ಕಾಣಿಸುತ್ತಿಲ್ಲ. ಮುಂದಿನ 10 ದಿನಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯಲಿದ್ದು, ಆ.23–25ರ ಅವಧಿ ಮತ್ತೊಮ್ಮೆ ಗಮನಾರ್ಹ ಮಳೆಯ ಅವಧಿಯಾಗಬಹುದು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka’s coastal districts are likely to continue receiving occasional rain over the next 10 days, with rainfall expected to increase slightly between August 23 and 25. Dakshina Kannada, particularly the Sulya and Kadaba areas, may see intermittent showers, while parts of Udupi, Uttara Kannada and Kasaragod may also receive light to moderate rain. Malnad areas adjoining the coast are likely to remain wetter until August 25, while rainfall activity is expected to remain relatively lower over North Interior Karnataka and parts of South Interior Karnataka.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

2 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

17 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

19 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago