Advertisement
ಸುದ್ದಿಗಳು

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

Share

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮತ್ತಷ್ಟು ದುರ್ಬಲವಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಆಗಸ್ಟ್ 23ರಿಂದ 25ರವರೆಗೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಕಂಡುಬರುತ್ತಿದೆ.

ಕರಾವಳಿಯಲ್ಲಿ ಬಿಡುವಿನ ಅವಧಿ ಹೆಚ್ಚಾಗುವ ಸಾಧ್ಯತೆ : ಆಗಸ್ಟ್ 23ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ಕಾಸರಗೋಡಿನಿಂದ ಉಡುಪಿ ತನಕ ಕರಾವಳಿ ತೀರವನ್ನು ಹೊರತುಪಡಿಸಿ ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಮೋಡಗಳ ಚಲನೆ ವಾಯವ್ಯದಿಂದ ಆಗ್ನೇಯ ದಿಕ್ಕಿನತ್ತ ಇರುವ ಹಿನ್ನೆಲೆಯಲ್ಲಿ ಮಡಿಕೇರಿ ಘಾಟಿಯ ಕೆಳಭಾಗದ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಅವಧಿಯಲ್ಲಿ ಮಳೆಯ ನಡುವಿನ ಬಿಡುವು ಸ್ವಲ್ಪ ಹೆಚ್ಚಾಗಬಹುದು. ಉಳಿದ ಕರಾವಳಿ ಪ್ರದೇಶಗಳಲ್ಲಿ ದಿನದಲ್ಲಿ ಒಂದೆರಡು ಬಾರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ಆಗಸ್ಟ್ 26ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಇಳಿಕೆಯಾಗುವ ಲಕ್ಷಣಗಳಿವೆ.

ಮಲೆನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ :  ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ದಿನದಲ್ಲಿ ಒಂದೆರಡು ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಬಹುದು.

ಆಗಸ್ಟ್ 23ರಿಂದ 25ರವರೆಗೆ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಮಾತ್ರ ಮಳೆಯ ಸಾಧ್ಯತೆ ಹೆಚ್ಚಿದ್ದು, ಒಟ್ಟಾರೆ ಮಳೆಯ ಪ್ರಮಾಣ ಕಡಿಮೆಯಾಗಿದೆ.

ಉತ್ತರ ಒಳನಾಡಿನಲ್ಲಿ ಬಹುತೇಕ ಒಣ ಹವೆ : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಧಾರವಾಡ, ಗದಗ ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಆಗಸ್ಟ್ 25ರವರೆಗೆ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಮಾತ್ರ ಇದೆ.

ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ : ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ದಿನದಲ್ಲಿ ಒಂದೆರಡು ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಆಗಸ್ಟ್ 25ರವರೆಗೆ ಈ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಮುಂದುವರಿಯಲಿದೆ.

ಮುಂಗಾರು ಇನ್ನಷ್ಟು ದುರ್ಬಲವಾಗುವ ಸೂಚನೆ :  ಮಧ್ಯಮ ವಾತಾವರಣದ ಸ್ತರದಲ್ಲಿ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಉಂಟಾಗಿದ್ದ ಸಣ್ಣ ಪ್ರಮಾಣದ ತಿರುಗುವಿಕೆ ಇದೀಗ ಶಿಥಿಲಗೊಳ್ಳುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ದುರ್ಬಲವಾಗುವ ಸಾಧ್ಯತೆ ಇದೆ.

ಕೃಷಿಕರಿಗೆ ಏನು ಸೂಚನೆ? :  ಕರಾವಳಿ ಮತ್ತು ಮಲೆನಾಡಿನ ತೋಟಗಾರಿಕಾ ಪ್ರದೇಶಗಳಲ್ಲಿ ಮಳೆಯ ನಡುವೆ ಬಿಡುವಿನ ಅವಧಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ತೋಟದ ನಿರ್ವಹಣಾ ಚಟುವಟಿಕೆಗಳನ್ನು ಸ್ಥಳೀಯ ಮಳೆಯ ಸ್ಥಿತಿಯನ್ನು ಗಮನಿಸಿ ಯೋಜಿಸುವುದು ಸೂಕ್ತ. ವಿಶೇಷವಾಗಿ ಅಡಿಕೆ, ತೆಂಗು, ಕಾಳುಮೆಣಸು ಸೇರಿದಂತೆ ತೇವಾಂಶ ಅವಲಂಬಿತ ಬೆಳೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವುದನ್ನು ಗಮನಿಸಿ ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶದ ಸ್ಥಿತಿಯನ್ನು ಪರಿಶೀಲಿಸುವುದು ಅಗತ್ಯ.

Karnataka is likely to experience relatively weak monsoon activity between August 23 and 25, with scattered normal rainfall mainly along coastal and adjoining Malnad regions. Coastal Karnataka may see longer dry intervals, while rainfall is expected to decline further from August 26. The weakening of a small circulation over the Bangladesh coast is likely to contribute to further weakening of the monsoon.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

7 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

19 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago