ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

August 7, 2026
11:12 AM
ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌ 9 ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಮಟ್ಟಿನ ಅವಕಾಶಗಳು ದೊರೆಯುವ ಸಾಧ್ಯತೆ ಇದೆ.

ಆಗಸ್ಟ್‌ 8, 2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ. ಕರಾವಳಿಯಲ್ಲಿ ಆಗಸ್ಟ್‌ 9ರಿಂದ ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಮಟ್ಟಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದ್ದರೂ ಮಳೆಯ ಪ್ರಮಾಣ ಉಳಿದ ಕರಾವಳಿ ಜಿಲ್ಲೆಗಳಿಗಿಂತ ಕಡಿಮೆ ಇರಬಹುದು.

ಪ್ರಸ್ತುತ ಲೆಕ್ಕಾಚಾರದ ಪ್ರಕಾರ, ಆಗಸ್ಟ್‌ 8 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಲಿದ್ದು, ಮಳೆಯ ನಡುವಿನ ಬಿಡುವಿನ ಅವಧಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದ ಆಗಸ್ಟ್‌ 9ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಅನುಕೂಲಕರ ಸಮಯ ದೊರೆಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಕೆಲವೆಡೆ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಆಗಸ್ಟ್‌ 8ರಿಂದ ಮಲೆನಾಡಿನಲ್ಲಿಯೂ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗಬಹುದು.

ಪ್ರಸ್ತುತ ಅಂದಾಜಿನಂತೆ ಆಗಸ್ಟ್‌ 14ರವರೆಗೆ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು: ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು (ಪಾವಗಡ ಸೇರಿದಂತೆ) ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು ಪರಿಸ್ಥಿತಿ :  ದಕ್ಷಿಣ ಜಪಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಬೃಹತ್ ಚಂಡಮಾರುತವು ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆಯುತ್ತಿರುವ ಪರಿಣಾಮ ಮುಂಗಾರು ಚುರುಕುಗೊಂಡಿದೆ. ಈ ಚಂಡಮಾರುತವು ಸುಮಾರು ಆಗಸ್ಟ್‌ 13ರ ಬಳಿಕ ದುರ್ಬಲಗೊಳ್ಳಲಿದ್ದು, ಅದರ ನಂತರ ರಾಜ್ಯದಲ್ಲಿ ಮುಂಗಾರಿನ ತೀವ್ರತೆ ಸಹ ಕಡಿಮೆಯಾಗುವ ಸಾಧ್ಯತೆ ಇದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rainfall is expected to gradually decrease across Karnataka’s coastal and Malnad regions from August 8. Coastal districts may get short dry spells from August 9, creating a favorable window for spraying plant protection chemicals in arecanut and other plantation crops. The southwest monsoon is currently active due to a strong typhoon over the seas near southern Japan, but monsoon intensity may weaken after August 13.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror