ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

February 18, 2026
10:36 PM

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶದೊಂದಿಗೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪುತ್ತೂರು, ಸುಳ್ಯ ತಾಲೂಕಿನ ಕೇರಳ ಗಡಿ ಭಾಗಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸುಳ್ಯ, ಸುಬ್ರಹ್ಯಣ್ಯ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯ ಕೆಲವೆಡೆ ಸಣ್ಣ ಪ್ರಮಾಣದ ಹನಿ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳು: ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು ಜಿಲ್ಲೆಗಳು:  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ ದಿನಗಳಲ್ಲಿ ಹಗಲಿನ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳು: ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಕಂಡುಬರುವ ಸಾಧ್ಯತೆ ಇದೆ. ಫೆಬ್ರುವರಿ 19ರಿಂದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಫೆಬ್ರುವರಿ 20ರಿಂದ ಕೆಲವೆಡೆ ಮಳೆಯಾಗುವ ಲಕ್ಷಣಗಳಿವೆ.

ವಾಯುಭಾರ ಕುಸಿತದ ಪರಿಣಾಮ : ಶ್ರೀಲಂಕಾ ದಕ್ಷಿಣ ಕರಾವಳಿಯ ಬಳಿ ಇರುವ ವಾಯುಭಾರ ಕುಸಿತ ಪಶ್ಚಿಮ ದಿಕ್ಕಿಗೆ ಚಲಿಸುವ ಲಕ್ಷಣಗಳಿವೆ. ಫೆಬ್ರುವರಿ 20 ಮತ್ತು 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Weather forecast indicates hot conditions with cloudy skies and chances of drizzle in coastal, Malnad, and south interior Karnataka from February 20. The changes are influenced by low-pressure systems near Sri Lanka, which may bring scattered rainfall across several districts.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ
February 18, 2026
10:28 PM
by: ದ ರೂರಲ್ ಮಿರರ್.ಕಾಂ
ಜೀವನಶೈಲಿ ಬದಲಿಸಿದರೆ ಕ್ಯಾನ್ಸರ್ ಅಪಾಯ ಕಡಿಮೆ | ಭಾರತದಲ್ಲಿ ಪ್ರಕರಣಗಳ ಏರಿಕೆ ಆತಂಕ
February 18, 2026
7:33 AM
by: ದ ರೂರಲ್ ಮಿರರ್.ಕಾಂ
ರೈತರ ಬೇಡಿಕೆಗಳಿಗೆ ಆದ್ಯತೆ : ಕೃಷಿ ಪ್ರತಿನಿಧಿಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
February 18, 2026
7:20 AM
by: ಮಿರರ್‌ ಡೆಸ್ಕ್
ಮೌಲ್ಯವರ್ಧನೆ ಮೂಲಕ ಉತ್ತಮ ಬೆಲೆ ಸಾಧ್ಯ – ರೈತರು ಉದ್ಯಮಿಗಳಾಗಬೇಕು
February 18, 2026
7:14 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror