Advertisement
ವೆದರ್ ಮಿರರ್

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

Share

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶದೊಂದಿಗೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪುತ್ತೂರು, ಸುಳ್ಯ ತಾಲೂಕಿನ ಕೇರಳ ಗಡಿ ಭಾಗಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸುಳ್ಯ, ಸುಬ್ರಹ್ಯಣ್ಯ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯ ಕೆಲವೆಡೆ ಸಣ್ಣ ಪ್ರಮಾಣದ ಹನಿ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳು: ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರುವರಿ 20 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು ಜಿಲ್ಲೆಗಳು:  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ ದಿನಗಳಲ್ಲಿ ಹಗಲಿನ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳು: ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಕಂಡುಬರುವ ಸಾಧ್ಯತೆ ಇದೆ. ಫೆಬ್ರುವರಿ 19ರಿಂದ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಫೆಬ್ರುವರಿ 20ರಿಂದ ಕೆಲವೆಡೆ ಮಳೆಯಾಗುವ ಲಕ್ಷಣಗಳಿವೆ.

ವಾಯುಭಾರ ಕುಸಿತದ ಪರಿಣಾಮ : ಶ್ರೀಲಂಕಾ ದಕ್ಷಿಣ ಕರಾವಳಿಯ ಬಳಿ ಇರುವ ವಾಯುಭಾರ ಕುಸಿತ ಪಶ್ಚಿಮ ದಿಕ್ಕಿಗೆ ಚಲಿಸುವ ಲಕ್ಷಣಗಳಿವೆ. ಫೆಬ್ರುವರಿ 20 ಮತ್ತು 21ರಂದು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Weather forecast indicates hot conditions with cloudy skies and chances of drizzle in coastal, Malnad, and south interior Karnataka from February 20. The changes are influenced by low-pressure systems near Sri Lanka, which may bring scattered rainfall across several districts.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

2 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

8 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

9 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

17 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

19 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago