Advertisement
ವೆದರ್ ಮಿರರ್

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

Share

06.03.2026 ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಬಿಸಿಲು ಮತ್ತು ಹಗಲಿನ ತಾಪಮಾನ ಏರಿಕೆ ಕಂಡುಬರುವ ನಿರೀಕ್ಷೆ ಇದೆ.

ಹವಾಮಾನ ವಿಶ್ಲೇಷಣೆಯ ಪ್ರಕಾರ, ಗುಜರಾತ್ ಪ್ರದೇಶದ ಬಳಿ ಮಧ್ಯಮ ಸ್ತರ ಹಾಗೂ ಮೇಲ್ಸ್ತರದಲ್ಲಿ ಉಷ್ಣ ಮಾರುತ ಪರಿಚಲನೆ (Anti-Cyclonic Circulation) ಮುಂದುವರಿದಿದೆ. ಇದರ ಪರಿಣಾಮವಾಗಿ ಉತ್ತರ ಭಾರತದ ಭಾಗಗಳಿಂದ ಬಿಸಿ ಹಾಗೂ ಶುಷ್ಕ ಗಾಳಿ ದಕ್ಷಿಣ ಭಾರತಕ್ಕೆ ಹರಿಯುತ್ತಿದೆ.

ಈ ವಾತಾವರಣ ವ್ಯವಸ್ಥೆಯ ಪರಿಣಾಮವಾಗಿ ರಾಜ್ಯದ ಹಲವೆಡೆ ಬಿಸಿಲು ಹೆಚ್ಚಾಗುವುದು, ಕೆಲವೆಡೆ ಸಣ್ಣ ಪ್ರಮಾಣದ ಮೋಡಾವರಣ ಕಂಡುಬರುವುದು ಸಾಧ್ಯ. ಆದರೆ ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಅತಿ ಕಡಿಮೆ ಎಂದು ಮುನ್ಸೂಚನೆ ಸೂಚಿಸುತ್ತದೆ.

ಅಂದಾಜಿನ ಪ್ರಕಾರ, ಈ ಉಷ್ಣ ಮಾರುತ ಪರಿಚಲನೆ ಮುಂದಿನ ಸುಮಾರು 10 ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಆದ್ದರಿಂದ ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಹೆಚ್ಚು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಸಲಹೆ : 

  • ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರಾವರಿ ನೀಡುವುದು ಅಗತ್ಯ

  • ತೋಟಗಾರಿಕೆ ಬೆಳೆಗಳಲ್ಲಿ ಮಣ್ಣಿನ ತೇವಾಂಶ ಉಳಿಸಲು ಕ್ರಮಗಳು ಉಪಯುಕ್ತ

  • ಮಳೆ ಅವಲಂಬಿತ ಬೆಳೆಗಳ ಹೊಸ ನಾಟಿ ಅಥವಾ ಬಿತ್ತನೆ ಸ್ವಲ್ಪ ಕಾಲ ಮುಂದೂಡುವುದು ಉತ್ತಮ

Dry weather is likely to continue across Karnataka until the morning of March 6, 2026, with higher daytime temperatures and occasional cloud cover. Due to an anti-cyclonic circulation over Gujarat bringing warm and dry winds from northern India, rainfall chances in the state are expected to remain very low for the next 10 days.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago