ಹವಾಮಾನ ವರದಿ | 02-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆಯ ಮುನ್ಸೂಚನೆ

February 2, 2026
4:06 PM

03.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ ಜಿಲ್ಲೆಗಳು : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಸಂಭವವಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯಲಿದೆ.  ಇನ್ನು ಉತ್ತರ ಕನ್ನಡ ಹೊರತುಪಡಿಸಿ ಉಳಿದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2–3 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಕೊಡಗು ಜಿಲ್ಲೆಯಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯೂ ಸಂಭವಿಸಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಸಂಪರ್ಕಿತ ಪ್ರದೇಶಗಳಲ್ಲಿ ಮೋಡ ಹೆಚ್ಚಾಗಿ ಕಾಣಿಸಬಹುದು. ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಇದೇ ಮೋಡದ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಆದರೆ ಮಳೆಯ ಸಾಧ್ಯತೆಗಳು ಇಲ್ಲದಂತೆಯೇ ಕಾಣಿಸುತ್ತಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಗೆ ಕೆಲವೆಡೆ ಮೋಡದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ 2 ದಿನಗಳ ಕಾಲ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮೋಡ ಹಾಗೂ ಮಳೆಯ ಕಾರಣ:  ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಆಂಧ್ರ ಕರಾವಳಿ ಮೂಲಕ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬಾಂಗ್ಲಾದೇಶದಲ್ಲಿ ಅಡಿಕೆ ನಿಯಂತ್ರಣಕ್ಕೆ ಸ್ಪಷ್ಟ ನೀತಿ ಇಲ್ಲ | WHO ವೆಬಿನಾರ್‌ನಲ್ಲಿ ಡಾ. ಅಬ್ದುಲ್ ಮಾಸೂದ್
February 3, 2026
12:52 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ
February 3, 2026
12:26 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮಾರ್ಚ್ ಒಳಗೆ ಚುನಾವಣೆ – ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
February 3, 2026
7:35 AM
by: ಮಿರರ್‌ ಡೆಸ್ಕ್
ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯಲ್ಲಿ ಭಾರತ ದಾಖಲೆ ಪ್ರಗತಿ | ಆಹಾರಧಾನ್ಯ ಉತ್ಪಾದನೆ 357.73 ಮಿಲಿಯನ್ ಟನ್
February 3, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror