ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ

February 3, 2026
12:26 PM
ರಾಜ್ಯದಲ್ಲಿ ಬಿಸಿಲಿನ ಜತೆಗೇ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರವರಿ 5 ರಿಂದ ಬಿಸಿಲಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ ಜಿಲ್ಲೆಗಳು :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಮಿಶ್ರಿತ ವಾತಾವರಣ ಕಂಡುಬರಲಿದೆ.  ಮಧ್ಯಾಹ್ನ ನಂತರ ಮೋಡದ ಪ್ರಮಾಣ ಹೆಚ್ಚಾಗಬಹುದು. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ತುಂತುರು ಹಾಗೂ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ.  ಫೆಬ್ರವರಿ 5ರಿಂದ ಇಲ್ಲಿ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ.

ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಜತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ.  ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಸಂಜೆ ತುಂತುರು ಮಳೆಯ ಸೂಚನೆ ಇದೆ. ಈ ಸ್ಥಿತಿ ಫೆಬ್ರವರಿ 5ರವರೆಗೆ ಮುಂದುವರಿಯಬಹುದು.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಾಣಬಹುದು. ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ–ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಲ್ಲಿ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಇಲ್ಲ. ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಸೂಚನೆ ಇದೆ.

ವಾತಾವರಣದ ಪ್ರಮುಖ ಕಾರಣ : ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಗಾಳಿಯು ಅರಬ್ಬಿ ಸಮುದ್ರ ಪ್ರವೇಶಿಸಿ ಮತ್ತೆ ಭೂಮಿ ಕಡೆಗೆ ತಿರುಗುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ಕರಾವಳಿ ಜಿಲ್ಲೆಗಳಲ್ಲಿಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಭಾರತದ ಮೇಲ್ಭಾಗಗಳಲ್ಲಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ರೈತರಿಗೆ ಸಣ್ಣ ಸಲಹೆ : ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ ಇರುವುದರಿಂದ ಅಡಿಕೆ/ ಕರಿಮೆಣಸು ಒಣಗಿಸುವ ಕೆಲಸದಲ್ಲಿ ಎಚ್ಚರಿಕೆ ಇರಲಿ.  ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಕಾರಣ ನೀರಾವರಿ ಯೋಜನೆಗೆ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳಿ .ಬೆಳಗಿನ ಚಳಿ ಕಡಿಮೆಯಾಗುತ್ತಿರುವುದರಿಂದ ಬೆಳೆಗಳಲ್ಲಿ ಕೀಟಗಳ ಚಟುವಟಿಕೆ ಗಮನಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror