ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ

February 3, 2026
12:26 PM
ರಾಜ್ಯದಲ್ಲಿ ಬಿಸಿಲಿನ ಜತೆಗೇ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಫೆಬ್ರವರಿ 5 ರಿಂದ ಬಿಸಿಲಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

Advertisement

ಕರಾವಳಿ ಜಿಲ್ಲೆಗಳು :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಮಿಶ್ರಿತ ವಾತಾವರಣ ಕಂಡುಬರಲಿದೆ.  ಮಧ್ಯಾಹ್ನ ನಂತರ ಮೋಡದ ಪ್ರಮಾಣ ಹೆಚ್ಚಾಗಬಹುದು. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ತುಂತುರು ಹಾಗೂ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ.  ಫೆಬ್ರವರಿ 5ರಿಂದ ಇಲ್ಲಿ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ.

ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಜತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ.  ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಸಂಜೆ ತುಂತುರು ಮಳೆಯ ಸೂಚನೆ ಇದೆ. ಈ ಸ್ಥಿತಿ ಫೆಬ್ರವರಿ 5ರವರೆಗೆ ಮುಂದುವರಿಯಬಹುದು.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಾಣಬಹುದು. ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ–ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಲ್ಲಿ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಇಲ್ಲ. ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಸೂಚನೆ ಇದೆ.

ವಾತಾವರಣದ ಪ್ರಮುಖ ಕಾರಣ : ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಗಾಳಿಯು ಅರಬ್ಬಿ ಸಮುದ್ರ ಪ್ರವೇಶಿಸಿ ಮತ್ತೆ ಭೂಮಿ ಕಡೆಗೆ ತಿರುಗುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ಕರಾವಳಿ ಜಿಲ್ಲೆಗಳಲ್ಲಿಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಭಾರತದ ಮೇಲ್ಭಾಗಗಳಲ್ಲಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ರೈತರಿಗೆ ಸಣ್ಣ ಸಲಹೆ : ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ ಇರುವುದರಿಂದ ಅಡಿಕೆ/ ಕರಿಮೆಣಸು ಒಣಗಿಸುವ ಕೆಲಸದಲ್ಲಿ ಎಚ್ಚರಿಕೆ ಇರಲಿ.  ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಕಾರಣ ನೀರಾವರಿ ಯೋಜನೆಗೆ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳಿ .ಬೆಳಗಿನ ಚಳಿ ಕಡಿಮೆಯಾಗುತ್ತಿರುವುದರಿಂದ ಬೆಳೆಗಳಲ್ಲಿ ಕೀಟಗಳ ಚಟುವಟಿಕೆ ಗಮನಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?
April 25, 2026
3:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror