Advertisement
ವೆದರ್ ಮಿರರ್

ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ

Share

04.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ ಜಿಲ್ಲೆಗಳು :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಮಿಶ್ರಿತ ವಾತಾವರಣ ಕಂಡುಬರಲಿದೆ.  ಮಧ್ಯಾಹ್ನ ನಂತರ ಮೋಡದ ಪ್ರಮಾಣ ಹೆಚ್ಚಾಗಬಹುದು. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕೆಲವೆಡೆ ತುಂತುರು ಹಾಗೂ ಸಣ್ಣ ಹನಿ ಮಳೆಯ ಸಾಧ್ಯತೆ ಇದೆ.  ಫೆಬ್ರವರಿ 5ರಿಂದ ಇಲ್ಲಿ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ.

ಮಲೆನಾಡು ಪ್ರದೇಶ : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಜತೆಗೆ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದೆ.  ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ ಸುತ್ತಮುತ್ತ ಸಂಜೆ ತುಂತುರು ಮಳೆಯ ಸೂಚನೆ ಇದೆ. ಈ ಸ್ಥಿತಿ ಫೆಬ್ರವರಿ 5ರವರೆಗೆ ಮುಂದುವರಿಯಬಹುದು.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಾಣಬಹುದು. ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಪ್ರಭಾವ ಹೆಚ್ಚಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ–ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಲ್ಲಿ ಹಗುರ ಮೋಡದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಇಲ್ಲ. ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಸೂಚನೆ ಇದೆ.

ವಾತಾವರಣದ ಪ್ರಮುಖ ಕಾರಣ : ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಗಾಳಿಯು ಅರಬ್ಬಿ ಸಮುದ್ರ ಪ್ರವೇಶಿಸಿ ಮತ್ತೆ ಭೂಮಿ ಕಡೆಗೆ ತಿರುಗುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ಕರಾವಳಿ ಜಿಲ್ಲೆಗಳಲ್ಲಿಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಭಾರತದ ಮೇಲ್ಭಾಗಗಳಲ್ಲಿ ಹಿಮಪಾತ ಹಾಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ರೈತರಿಗೆ ಸಣ್ಣ ಸಲಹೆ : ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ ಇರುವುದರಿಂದ ಅಡಿಕೆ/ ಕರಿಮೆಣಸು ಒಣಗಿಸುವ ಕೆಲಸದಲ್ಲಿ ಎಚ್ಚರಿಕೆ ಇರಲಿ.  ಫೆಬ್ರವರಿ 5ರಿಂದ ಬಿಸಿಲು ಹೆಚ್ಚಾಗುವ ಕಾರಣ ನೀರಾವರಿ ಯೋಜನೆಗೆ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳಿ .ಬೆಳಗಿನ ಚಳಿ ಕಡಿಮೆಯಾಗುತ್ತಿರುವುದರಿಂದ ಬೆಳೆಗಳಲ್ಲಿ ಕೀಟಗಳ ಚಟುವಟಿಕೆ ಗಮನಿಸಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

17 hours ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

1 day ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

1 day ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

1 day ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

1 day ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

1 day ago