Advertisement
ವೆದರ್ ಮಿರರ್

ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?

Share

11.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸ್ವಲ್ಪ ಮಟ್ಟಿಗೆ ಚಳಿ ಕಡಿಮೆ ಇರಬಹುದು. ಈಗಿನಂತೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ತುಂತುರು ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 11 ಹಾಗೂ 12ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬಳ್ಳಾರಿ ಜಿಲ್ಲೆಯ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಈ ವಾತಾವರಣವು ಜನವರಿ 12 ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶ್ರೀಲಂಕಾ ಹಾಗೂ ತಮಿಳುನಾಡು ಮಧ್ಯ ತಲುಪಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

7 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

15 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

22 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago