ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

July 11, 2026
2:14 PM
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ ಮುಂದುವರಿಯಲಿದೆ.

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ :  ಮಧ್ಯಮ ಸ್ತರದಲ್ಲಿ ಗಾಳಿಯ ಸಂಚಾರವು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳು, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಣ್ಣ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಲೆಕ್ಕಾಚಾರದಂತೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಬಿಸಿಲು-ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಜುಲೈ 17ರಿಂದ ಮಳೆ ಚಟುವಟಿಕೆ ಮತ್ತೆ ಚುರುಕಾಗುವ ಲಕ್ಷಣಗಳಿದ್ದರೂ, ಇನ್ನೂ ಕೆಲವು ದಿನಗಳಿರುವುದರಿಂದ ಮುನ್ಸೂಚನೆಯಲ್ಲಿ ಬದಲಾವಣೆ ಸಾಧ್ಯ.

ಮಲೆನಾಡು :  ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.  ಪ್ರಸ್ತುತ ಮುನ್ಸೂಚನೆಯಂತೆ ಮಲೆನಾಡಿನಲ್ಲಿ ಜುಲೈ 19ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಮುಂದಿನ 10 ದಿನಗಳವರೆಗೆ ಗಮನಾರ್ಹ ಮಳೆಯ ಲಕ್ಷಣಗಳು ಗೋಚರಿಸುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಮುಂದಿನ 10 ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಮುಂಗಾರು ದುರ್ಬಲಗೊಂಡಿರುವ ಕಾರಣ ಮಧ್ಯಮ ಸ್ತರದಲ್ಲಿ ಉತ್ತರ ಭಾಗದಿಂದ ಪಾಕಿಸ್ತಾನದ ಮೂಲಕ ಭಾರತದ ವಾಯವ್ಯದಿಂದ ಆಗ್ನೇಯ ದಿಕ್ಕಿನತ್ತ ಒಣಗಾಳಿ ಬಲವಾಗಿ ಹರಿಯುತ್ತಿದೆ.  ಇದರ ಜೊತೆಗೆ, ಅಲ್ಪ ಪ್ರಮಾಣದ ಮುಂಗಾರು ಗಾಳಿಯೂ ಇದೇ ದಿಕ್ಕಿನಲ್ಲಿ ಸಾಗುತ್ತಿರುವುದರಿಂದ ಮಡಿಕೇರಿ ಹಾಗೂ ಶಿರಾಡಿ ಘಾಟ್‌ನ ಕೆಳಭಾಗದ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ಸಾಮಾನ್ಯ ಮಳೆಯಾಗುತ್ತಿದೆ. ರಾಜ್ಯದ ಉಳಿದ ಬಹುತೇಕ ಭಾಗಗಳಲ್ಲಿ ಮಳೆ ಚಟುವಟಿಕೆ ಗಣನೀಯವಾಗಿ ಕುಂಠಿತವಾಗಿದೆ.

 ರೈತರಿಗೆ ಸಲಹೆ

  • ಅಡಿಕೆ, ಕಾಫಿ, ಮೆಣಸು ಹಾಗೂ ತೆಂಗಿನ ತೋಟಗಳಲ್ಲಿ ಮಣ್ಣಿನ ತೇವಾಂಶವನ್ನು ಕಾಪಾಡುವ ಕ್ರಮಗಳಿಗೆ ಆದ್ಯತೆ ನೀಡಿ.
  • ಮಳೆ ವಿರಾಮದ ಅವಧಿಯನ್ನು ಬಳಸಿಕೊಂಡು ಕಳೆ ನಿಯಂತ್ರಣ, ಗೊಬ್ಬರ ನಿರ್ವಹಣೆ ಹಾಗೂ ತೋಟದ ಸ್ವಚ್ಛತೆ ಕೈಗೊಳ್ಳಬಹುದು.
  • ನೀರಾವರಿ ಸೌಲಭ್ಯ ಇರುವ ಕಡೆಗಳಲ್ಲಿ ಅಗತ್ಯವಿದ್ದರೆ ನೀರಾವರಿ  ನೀಡುವುದು ಬೆಳೆಗಳಿಗೆ ಅನುಕೂಲಕರ.
ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

The southwest monsoon remains weak across Karnataka. Only isolated light rain is expected over parts of Sullia, Kadaba, and Somwarpet, while most coastal, Malnad, and interior districts will experience sunny to partly cloudy conditions. Rainfall is expected to remain subdued for the next several days, with coastal rainfall likely to improve after July 17 if weather patterns evolve as projected.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ
July 11, 2026
11:03 AM
by: ದ ರೂರಲ್ ಮಿರರ್.ಕಾಂ
ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು
July 11, 2026
10:28 AM
by: ದ ರೂರಲ್ ಮಿರರ್.ಕಾಂ
ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror