Advertisement
ವೆದರ್ ಮಿರರ್

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

Share

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Advertisement

ಕರಾವಳಿ :  ಮಧ್ಯಮ ಸ್ತರದಲ್ಲಿ ಗಾಳಿಯ ಸಂಚಾರವು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳು, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಣ್ಣ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಈಗಿನ ಲೆಕ್ಕಾಚಾರದಂತೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಬಿಸಿಲು-ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಜುಲೈ 17ರಿಂದ ಮಳೆ ಚಟುವಟಿಕೆ ಮತ್ತೆ ಚುರುಕಾಗುವ ಲಕ್ಷಣಗಳಿದ್ದರೂ, ಇನ್ನೂ ಕೆಲವು ದಿನಗಳಿರುವುದರಿಂದ ಮುನ್ಸೂಚನೆಯಲ್ಲಿ ಬದಲಾವಣೆ ಸಾಧ್ಯ.

ಮಲೆನಾಡು :  ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.  ಪ್ರಸ್ತುತ ಮುನ್ಸೂಚನೆಯಂತೆ ಮಲೆನಾಡಿನಲ್ಲಿ ಜುಲೈ 19ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

Advertisement

ಉತ್ತರ ಒಳನಾಡು :  ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಮುಂದಿನ 10 ದಿನಗಳವರೆಗೆ ಗಮನಾರ್ಹ ಮಳೆಯ ಲಕ್ಷಣಗಳು ಗೋಚರಿಸುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಮುಂದಿನ 10 ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

Advertisement

ಮುಂಗಾರು ದುರ್ಬಲಗೊಂಡಿರುವ ಕಾರಣ ಮಧ್ಯಮ ಸ್ತರದಲ್ಲಿ ಉತ್ತರ ಭಾಗದಿಂದ ಪಾಕಿಸ್ತಾನದ ಮೂಲಕ ಭಾರತದ ವಾಯವ್ಯದಿಂದ ಆಗ್ನೇಯ ದಿಕ್ಕಿನತ್ತ ಒಣಗಾಳಿ ಬಲವಾಗಿ ಹರಿಯುತ್ತಿದೆ.  ಇದರ ಜೊತೆಗೆ, ಅಲ್ಪ ಪ್ರಮಾಣದ ಮುಂಗಾರು ಗಾಳಿಯೂ ಇದೇ ದಿಕ್ಕಿನಲ್ಲಿ ಸಾಗುತ್ತಿರುವುದರಿಂದ ಮಡಿಕೇರಿ ಹಾಗೂ ಶಿರಾಡಿ ಘಾಟ್‌ನ ಕೆಳಭಾಗದ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ಸಾಮಾನ್ಯ ಮಳೆಯಾಗುತ್ತಿದೆ. ರಾಜ್ಯದ ಉಳಿದ ಬಹುತೇಕ ಭಾಗಗಳಲ್ಲಿ ಮಳೆ ಚಟುವಟಿಕೆ ಗಣನೀಯವಾಗಿ ಕುಂಠಿತವಾಗಿದೆ.

 ರೈತರಿಗೆ ಸಲಹೆ

Advertisement
  • ಅಡಿಕೆ, ಕಾಫಿ, ಮೆಣಸು ಹಾಗೂ ತೆಂಗಿನ ತೋಟಗಳಲ್ಲಿ ಮಣ್ಣಿನ ತೇವಾಂಶವನ್ನು ಕಾಪಾಡುವ ಕ್ರಮಗಳಿಗೆ ಆದ್ಯತೆ ನೀಡಿ.
  • ಮಳೆ ವಿರಾಮದ ಅವಧಿಯನ್ನು ಬಳಸಿಕೊಂಡು ಕಳೆ ನಿಯಂತ್ರಣ, ಗೊಬ್ಬರ ನಿರ್ವಹಣೆ ಹಾಗೂ ತೋಟದ ಸ್ವಚ್ಛತೆ ಕೈಗೊಳ್ಳಬಹುದು.
  • ನೀರಾವರಿ ಸೌಲಭ್ಯ ಇರುವ ಕಡೆಗಳಲ್ಲಿ ಅಗತ್ಯವಿದ್ದರೆ ನೀರಾವರಿ  ನೀಡುವುದು ಬೆಳೆಗಳಿಗೆ ಅನುಕೂಲಕರ.
ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

The southwest monsoon remains weak across Karnataka. Only isolated light rain is expected over parts of Sullia, Kadaba, and Somwarpet, while most coastal, Malnad, and interior districts will experience sunny to partly cloudy conditions. Rainfall is expected to remain subdued for the next several days, with coastal rainfall likely to improve after July 17 if weather patterns evolve as projected.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

4 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

5 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

9 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

2 days ago