ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

July 13, 2026
2:42 PM
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ 17ರಿಂದ ಹಾಗೂ ದಕ್ಷಿಣ ಕರಾವಳಿಯಲ್ಲಿ 19-20ರ ಬಳಿಕ ಸಾಮಾನ್ಯ ಮಳೆ ಮರಳುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮತ್ತೆ ದುರ್ಬಲಗೊಂಡಿದ್ದು, 2026ರ ಜುಲೈ 14ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ಸುಮಾರು 10 ದಿನಗಳವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

ಕರಾವಳಿ ಜಿಲ್ಲೆಗಳು (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ) ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಆದರೆ ಕಳೆದ ಕೆಲವು ದಿನಗಳಂತೆ ಭಾರೀ ಮಳೆಯ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ.

ಮುನ್ಸೂಚನೆಯ ಪ್ರಕಾರ ಜುಲೈ 17ರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಹಾಗೂ ಜುಲೈ 19 ಅಥವಾ 20 ರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮತ್ತೆ ಆರಂಭವಾಗುವ ನಿರೀಕ್ಷೆಯಿದೆ.

ಇನ್ನೊಂದೆಡೆ ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡಗಳು ಮಾತ್ರ ಕಂಡುಬರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲೂ ಮುಂದಿನ 10 ದಿನಗಳವರೆಗೆ ಗಮನಾರ್ಹ ಮಳೆಯ ಮುನ್ಸೂಚನೆ ಇಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸೂಪರ್ ಎಲ್ ನಿನೋ ಪರಿಣಾಮದಿಂದ ಮುಂಗಾರು ಮಾರುತಗಳು ಇದ್ದರೂ ಅವು ತೇವಾಂಶಯುಕ್ತ ಮೋಡಗಳನ್ನು ರಾಜ್ಯದತ್ತ ಸಮರ್ಪಕವಾಗಿ ತರಲು ವಿಫಲವಾಗಿವೆ. ಜೊತೆಗೆ ಸದ್ಯ ಯಾವುದೇ ವಾಯುಭಾರ ಕುಸಿತ (Low Pressure Area) ರೂಪುಗೊಂಡಿಲ್ಲ. ಇದರ ಪರಿಣಾಮವಾಗಿ ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ಭಾಗಗಳಲ್ಲೂ ಮಳೆಯ ಚಟುವಟಿಕೆ ಕುಂಠಿತವಾಗಿದೆ.

ಇದರೊಂದಿಗೆ ಭೂಮಿಯ ಉತ್ತರ ಭಾಗದಿಂದ ಭಾರತದತ್ತ ಒಣಗಾಳಿ ಪ್ರಬಲವಾಗಿ ಬೀಸುತ್ತಿರುವುದೂ ಮಳೆಯ ಪ್ರಮಾಣ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ.

ರೈತರಿಗೆ ಸಲಹೆ

  • ಅಡಿಕೆ, ತೆಂಗು, ರಬ್ಬರ್ ಹಾಗೂ ಕಾಫಿ ತೋಟಗಳಲ್ಲಿ ಮಣ್ಣಿನ ತೇವಾಂಶ ಸಂರಕ್ಷಣೆಗೆ ಆದ್ಯತೆ ನೀಡಿ.
  • ಹೊಸದಾಗಿ ನೆಟ್ಟ ಸಸಿಗಳಿಗೆ ಅಗತ್ಯವಿದ್ದರೆ ನೀರಾವರಿ ಒದಗಿಸಿ.
  • ಮಳೆ ಬರುವ ನಿರೀಕ್ಷೆಯಲ್ಲಿ ಗೊಬ್ಬರ ಹಾಕುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು ಸೂಕ್ತ.
  • ಮಳೆ ಆರಂಭವಾದ ಬಳಿಕವೇ ಪ್ರಮುಖ ಬೆಳೆ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವುದು ಉತ್ತಮ.

Karnataka is expected to witness weak monsoon conditions over the next 10 days. Coastal districts may receive only isolated drizzle, while Malnad, North Interior, and South Interior Karnataka are likely to remain mostly dry. Normal rainfall may resume in Uttara Kannada from July 17 and in Dakshina Kannada and Udupi around July 19–20. Super El Niño, the absence of low-pressure systems, and dry northerly winds are suppressing rainfall across much of India.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror