ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

July 24, 2026
4:21 PM
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಗುಜರಾತ್ ಮೇಲಿನ ತಿರುಗುವಿಕೆ ದುರ್ಬಲಗೊಂಡ ಬಳಿಕ ಮುಂಗಾರು ದುರ್ಬಲವಾಗಬಹುದಾದರೂ, ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತ ನಿರ್ಮಾಣವಾದರೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ.

ಜುಲೈ 25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ ಮತ್ತು ಮಲೆನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯ ವಾತಾವರಣ ಮುಂದುವರಿಯಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣದ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ಮೇಲಿನ ವಾಯುಭಾರ ಕುಸಿತದ ತಿರುಗುವಿಕೆ ಶಿಥಿಲಗೊಂಡ ಬಳಿಕ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತ ನಿರ್ಮಾಣವಾದರೆ ಮತ್ತೆ ಮಳೆ ಚುರುಕಾಗುವ ಸಾಧ್ಯತೆಯಿದೆ.

Advertisement

ಕರಾವಳಿ ಜಿಲ್ಲೆಗಳ ಮುನ್ಸೂಚನೆ :  ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಮತ್ತು ರಾತ್ರಿ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಧ್ಯಾಹ್ನ, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ.

Advertisement

ವಾಯವ್ಯದಿಂದ ಆಗ್ನೇಯದತ್ತ ಗಾಳಿಯ ಚಲನೆ ಇರುವುದರಿಂದ ಸುಳ್ಯ, ಮಡಿಕೇರಿ ಘಾಟಿ ಹಾಗೂ ಘಾಟಿಯ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ.

ಮಲೆನಾಡಿನ ಮುನ್ಸೂಚನೆ :  ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಗಾಳಿಯ ದಿಕ್ಕಿನ ಪರಿಣಾಮ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಹಾಸನ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯಾಗಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಬಿಟ್ಟುಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement

ಉತ್ತರ ಒಳನಾಡಿನ ಮುನ್ಸೂಚನೆ : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಜುಲೈ 27ರಿಂದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನ ಮುನ್ಸೂಚನೆ : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದೆ. ಜುಲೈ 26ರಿಂದ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಇಳಿಮುಖವಾಗುವ ಸೂಚನೆಗಳಿವೆ.

Advertisement

ಮುಂಗಾರು ಪರಿಸ್ಥಿತಿ ಹೇಗಿದೆ? :  ಪ್ರಸ್ತುತ ಗುಜರಾತ್ ರಾಜ್ಯದ ಮೇಲಿರುವ ವಾಯುಭಾರ ಕುಸಿತದಂತಿರುವ ತಿರುಗುವಿಕೆಯ ಪರಿಣಾಮ ಕಳೆದ ಮೂರು ದಿನಗಳಿಂದ ಅಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಈ ವ್ಯವಸ್ಥೆ ದುರ್ಬಲಗೊಂಡ ಬಳಿಕ ರಾಜ್ಯದಲ್ಲೂ ಮುಂಗಾರು ಚಟುವಟಿಕೆ ಕ್ಷೀಣಿಸುವ ಸಾಧ್ಯತೆ ಇದೆ. ಆದರೆ ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತ ನಿರ್ಮಾಣವಾದರೆ ಮುಂಗಾರು ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka is likely to witness light to moderate rain across coastal and Malnad districts till the morning of July 25, with heavier showers possible around Sulya and the Madikeri Ghat region due to northwesterly winds. As the Gujarat cyclonic circulation weakens, the southwest monsoon is expected to lose strength, though a fresh low-pressure system over the Bay of Bengal could revive rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror