ಜುಲೈ 5, 2026ರ ಬೆಳಿಗ್ಗೆ 8 ಗಂಟೆಯವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದ್ದು, ಜುಲೈ 10ರ ಬಳಿಕ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.
ಕರಾವಳಿ ಭಾಗ: ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಿರಬಹುದು. ಈಗಿನ ಮುನ್ಸೂಚನೆಯಂತೆ ಜುಲೈ 10ರ ನಂತರ ಕರಾವಳಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.
ಮಲೆನಾಡು: ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನದ ಬಳಿಕ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 9ರವರೆಗೆ ಇದೇ ಮಾದರಿಯ ಹವಾಮಾನ ಮುಂದುವರಿಯುವ ಲಕ್ಷಣಗಳಿವೆ. ಬಳಿಕ ಮಳೆಯ ಪ್ರಮಾಣ ಇಳಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯ ಸಾಧ್ಯತೆ ಇದೆ. ನಿರೀಕ್ಷಿತ ಪ್ರಮಾಣದ ಮಳೆಯಾಗುತ್ತಿಲ್ಲ. ಜುಲೈ 5ರಿಂದ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು: ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಬಹುದು. ಜುಲೈ 5 ಅಥವಾ 6ರಿಂದ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಹವಾಮಾನ ತಜ್ಞರ ಪ್ರಕಾರ, ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ತಿರುವಿಕೆ (Cyclonic Circulation) ಮುಂದಿನ ಎರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.
ರೈತರಿಗೆ ಸಲಹೆ: ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ಇತರೆ ತೋಟಗಾರಿಕಾ ಬೆಳೆಗಳಲ್ಲಿ ರೋಗ ನಿಯಂತ್ರಣ, ಗೊಬ್ಬರ ನಿರ್ವಹಣೆ ಹಾಗೂ ಅಗತ್ಯ ಸಿಂಪಡಣೆ ಕಾರ್ಯಗಳನ್ನು ಸ್ಥಳೀಯ ಹವಾಮಾನವನ್ನು ಗಮನಿಸಿ ಯೋಜಿಸಿಕೊಳ್ಳುವುದು ಸೂಕ್ತ. ಇತರ ಕೃಷಿಗಳಲ್ಲೂ ಮಳೆಯ ಸಾಧ್ಯತೆ ಗಮನಿಸಿಕೊಳ್ಳುವುದು ಉತ್ತಮ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
The latest Karnataka weather forecast indicates moderate rainfall over Coastal and Malnad regions until July 9–10, after which the southwest monsoon is likely to weaken. North and South Interior Karnataka are expected to experience more sunshine with only scattered rainfall.
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…