ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

July 7, 2026
12:25 PM
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಬಿಟ್ಟುಬಿಟ್ಟು ಮಳೆಯ ವಾತಾವರಣ ಮುಂದುವರಿಯಲಿದ್ದು, ಜುಲೈ 11ರಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದರೂ, ಹಂತ ಹಂತವಾಗಿ ಬಿಸಿಲಿನ ವಾತಾವರಣ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ.

Advertisement

ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಮುಂದುವರಿಯುವ ಸಾಧ್ಯತೆ ಇದೆ. ಪ್ರಸ್ತುತ ಅಂದಾಜಿನಂತೆ ಜುಲೈ 9ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಜುಲೈ 11ರಿಂದ ಬಿಸಿಲು-ಮೋಡದ ವಾತಾವರಣ ಹೆಚ್ಚಾಗುವ ಲಕ್ಷಣಗಳಿವೆ.

Advertisement

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡಿನ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಜುಲೈ 9ರಿಂದ ಮಳೆ ಇಳಿಕೆಯಾಗಲಿದ್ದು, ಜುಲೈ 10ರಿಂದ ಬಿಸಿಲು ಮತ್ತು ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದೆ. ಗದಗ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹೆಚ್ಚಿರಲಿದೆ. ಜುಲೈ 10ರಿಂದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

Advertisement

ದಕ್ಷಿಣ ಒಳನಾಡು :  ಮೈಸೂರು, ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ತಿರುವಿಕೆಯ ಪ್ರಭಾವ :  ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಮಧ್ಯಮ ಹಾಗೂ ಕೆಳಸ್ತರದ ತಿರುವಿಕೆ ಮುಂದುವರಿದಿರುವ ಕಾರಣ ಮುಂಬೈ ಭಾಗದಲ್ಲಿ ಇಂದೂ ಭಾರೀ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲೂ ಇನ್ನೂ ಕೆಲವು ದಿನ ಮಳೆಯ ವಾತಾವರಣ ಮುಂದುವರಿಯಲಿದೆ.

Advertisement

ರೈತರಿಗೆ ಏನು ಸೂಚನೆ? :  ಜುಲೈ 11ರಿಂದ ಮಳೆ ಗಮನಾರ್ಹವಾಗಿ ಕಡಿಮೆಯಾದರೆ ಅಡಿಕೆ, ಕಾಫಿ, ಮೆಣಸು ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆ, ಗೊಬ್ಬರ ನಿರ್ವಹಣೆ ಹಾಗೂ ಇತರೆ ಕೃಷಿ ಕಾರ್ಯಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆದರೆ ಸ್ಥಳೀಯ ಮಳೆಯ ಪರಿಸ್ಥಿತಿಯನ್ನು ಗಮನಿಸಿ ಮಾತ್ರ ಕೃಷಿ ಕಾರ್ಯಗಳನ್ನು ಕೈಗೊಳ್ಳುವುದು ಸೂಕ್ತ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rain is expected to continue intermittently across Karnataka until around July 10, especially in the coastal and Malnad regions. Forecasts indicate a significant reduction in rainfall from July 11, bringing more sunshine and cloudy conditions, which may provide farmers with a suitable window for crop protection and field operations.

Advertisement

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror