Advertisement
ವೆದರ್ ಮಿರರ್

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

Share

ರಾಜ್ಯದ ಬಹುತೇಕ ಭಾಗಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಬಿಟ್ಟುಬಿಟ್ಟು ಮಳೆಯ ವಾತಾವರಣ ಮುಂದುವರಿಯಲಿದ್ದು, ಜುಲೈ 11ರಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದರೂ, ಹಂತ ಹಂತವಾಗಿ ಬಿಸಿಲಿನ ವಾತಾವರಣ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಜಿಲ್ಲೆಗಳು : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಮುಂದುವರಿಯುವ ಸಾಧ್ಯತೆ ಇದೆ. ಪ್ರಸ್ತುತ ಅಂದಾಜಿನಂತೆ ಜುಲೈ 9ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಜುಲೈ 11ರಿಂದ ಬಿಸಿಲು-ಮೋಡದ ವಾತಾವರಣ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡಿನ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಜುಲೈ 9ರಿಂದ ಮಳೆ ಇಳಿಕೆಯಾಗಲಿದ್ದು, ಜುಲೈ 10ರಿಂದ ಬಿಸಿಲು ಮತ್ತು ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದೆ. ಗದಗ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹೆಚ್ಚಿರಲಿದೆ. ಜುಲೈ 10ರಿಂದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು :  ಮೈಸೂರು, ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ತಿರುವಿಕೆಯ ಪ್ರಭಾವ :  ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಮಧ್ಯಮ ಹಾಗೂ ಕೆಳಸ್ತರದ ತಿರುವಿಕೆ ಮುಂದುವರಿದಿರುವ ಕಾರಣ ಮುಂಬೈ ಭಾಗದಲ್ಲಿ ಇಂದೂ ಭಾರೀ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲೂ ಇನ್ನೂ ಕೆಲವು ದಿನ ಮಳೆಯ ವಾತಾವರಣ ಮುಂದುವರಿಯಲಿದೆ.

ರೈತರಿಗೆ ಏನು ಸೂಚನೆ? :  ಜುಲೈ 11ರಿಂದ ಮಳೆ ಗಮನಾರ್ಹವಾಗಿ ಕಡಿಮೆಯಾದರೆ ಅಡಿಕೆ, ಕಾಫಿ, ಮೆಣಸು ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆ, ಗೊಬ್ಬರ ನಿರ್ವಹಣೆ ಹಾಗೂ ಇತರೆ ಕೃಷಿ ಕಾರ್ಯಗಳಿಗೆ ಅನುಕೂಲಕರ ವಾತಾವರಣ ಸಿಗುವ ಸಾಧ್ಯತೆ ಇದೆ. ಆದರೆ ಸ್ಥಳೀಯ ಮಳೆಯ ಪರಿಸ್ಥಿತಿಯನ್ನು ಗಮನಿಸಿ ಮಾತ್ರ ಕೃಷಿ ಕಾರ್ಯಗಳನ್ನು ಕೈಗೊಳ್ಳುವುದು ಸೂಕ್ತ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rain is expected to continue intermittently across Karnataka until around July 10, especially in the coastal and Malnad regions. Forecasts indicate a significant reduction in rainfall from July 11, bringing more sunshine and cloudy conditions, which may provide farmers with a suitable window for crop protection and field operations.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago