ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

June 10, 2026
2:46 PM
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಸಾಮಾನ್ಯ ಮಳೆ ಮಾತ್ರ ಮುಂದುವರಿಯುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಸದ್ಯ ದುರ್ಬಲಗೊಂಡಿದ್ದು, ಮುಂದಿನ 10 ದಿನಗಳವರೆಗೆ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲ ಎಂದು ಹವಾಮಾನ ವಿಶ್ಲೇಷಣೆಗಳು ಸೂಚಿಸಿವೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಬಿಸಿಲು-ಮೋಡದ ವಾತಾವರಣದ ನಡುವೆ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ದುರ್ಬಲ ಮುಂಗಾರು : ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ 2-3 ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲವಾಗಿರುವುದರಿಂದ ಭಾರೀ ಮಳೆಯ ಸಾಧ್ಯತೆಗಳು ಕಡಿಮೆಯಾಗಿವೆ.

Advertisement

ಮಲೆನಾಡಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ನಡುವೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗಬಹುದು. ಮುಂದಿನ 10 ದಿನಗಳವರೆಗೆ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಕಂಡುಬಂದಿಲ್ಲ.

ಉತ್ತರ ಒಳನಾಡಿನಲ್ಲಿ ಸಂಜೆ ಮಳೆ : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹಲವೆಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೆ ಇದೇ ಮಾದರಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 10 ದಿನಗಳಲ್ಲಿ 6 ರಿಂದ 7 ದಿನಗಳ ಕಾಲ ಅಲ್ಲಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

ಮುಂಗಾರು ಪರಿಸ್ಥಿತಿಯಲ್ಲಿ ಬದಲಾವಣೆ :  ಭೂಮಧ್ಯ ರೇಖೆಯ ದಕ್ಷಿಣ ಭಾಗದಲ್ಲಿರುವ ಹಿಂದೂ ಮಹಾಸಾಗರದಲ್ಲಿ ಮುಂಗಾರಿಗೆ ಪೂರಕವಾದ ವಾತಾವರಣದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತಿವೆ. ಆಸ್ಟ್ರೇಲಿಯಾ ಭಾಗದಿಂದ ಬೀಸುವ ಮಾರುತಗಳು ದುರ್ಬಲಗೊಂಡಿದ್ದು, ಸೋಮಾಲಿಯಾ ಜೆಟ್ ಸ್ಟ್ರೀಮ್‌ಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಇದರ ಪರಿಣಾಮ ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Monsoon activity over Karnataka remains weak, reducing the chances of widespread heavy rainfall over the next 10 days. Coastal, Malnad and interior regions are expected to receive only scattered light to moderate showers, with thunderstorm activity mainly over South Interior Karnataka.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror