Advertisement
ವೆದರ್ ಮಿರರ್

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸದ್ಯ ದುರ್ಬಲವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಸಾಧಾರಣ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಜೂನ್ 24ರಿಂದ ಮಳೆ ಆರಂಭ ಸಾಧ್ಯತೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಮತ್ತು ಮೋಡ ಮಿಶ್ರಿತ ವಾತಾವರಣ ಇರಲಿದೆ.

ಪ್ರಸ್ತುತ ಮುಂಗಾರು ದುರ್ಬಲವಾಗಿದ್ದರೂ ಜೂನ್ 22ರಿಂದ ಕರಾವಳಿ ಭಾಗದಲ್ಲಿ ಸ್ವಲ್ಪ ಚೇತರಿಕೆ ಕಾಣಬಹುದು. ಜೂನ್ 24ರಿಂದ ಸಾಮಾನ್ಯ ಮಳೆ ಆರಂಭವಾಗಿ, ಜೂನ್ 26ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ :  ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಹೊಂದಿಕೊಂಡ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಭಾಗದಲ್ಲಿ ಜೂನ್ 27ರಿಂದ ಮುಂಗಾರು ಸ್ವಲ್ಪ ಚುರುಕುಗೊಳ್ಳುವ ಲಕ್ಷಣಗಳಿದ್ದು, ಅಲ್ಲಿಯವರೆಗೆ ಸಾಮಾನ್ಯ ಮಳೆ ಮುಂದುವರಿಯಲಿದೆ.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಉತ್ತಮ ಮಳೆ : ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಂಡುಬರಬಹುದು.

ಜೂನ್ 22ರಿಂದ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.

ಜೂನ್ 22ರಿಂದ ಈ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಜೂನ್ 26ರಿಂದ ಮುಂಗಾರಿಗೆ ಬಲ : ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದ್ದು, ಜೂನ್ 26ರಿಂದ ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳಿಗೆ ಬಲ ದೊರೆಯುವ ನಿರೀಕ್ಷೆ ಇದೆ. ಇದರಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಸಲಹೆ : ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯ ಸಾಧ್ಯತೆ ಕಡಿಮೆ ಇರುವುದರಿಂದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ರೋಗ ನಿಯಂತ್ರಣ ಸಿಂಪಡಣೆ, ಗೊಬ್ಬರ ನಿರ್ವಹಣೆ ಹಾಗೂ ತೋಟದ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲು ಇದು ಸೂಕ್ತ ಸಮಯವಾಗಿದೆ. ಉಳಿದ ಕೃಷಿಗಳಲ್ಲಿ ಬಿತ್ತನೆ, ರಸಗೊಬ್ಬರ ನೀಡುವುದು, ಕಳೆ ನಿರ್ವಹಣೆ ಇತ್ಯಾದಿಗಳ ಕಡೆಗೆ ಗಮನ ನೀಡುವುದು ಸೂಕ್ತ.

Monsoon activity remains weak across Karnataka, with mostly cloudy weather and light rainfall expected in many districts until June 26. Weather models indicate a gradual revival of the southwest monsoon from June 26, bringing increased rainfall to coastal and Malnad regions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

23 minutes ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

58 minutes ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

1 hour ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

4 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago

ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?

ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…

18 hours ago