Advertisement
ವೆದರ್ ಮಿರರ್

ಹವಾಮಾನ ವರದಿ | 12-06-2026 | ಕರ್ನಾಟಕದಲ್ಲಿ ಮುಂದುವರಿದ ಮಳೆಯ ವಾತಾವರಣ : ಕರಾವಳಿಯಲ್ಲಿ ಮಳೆ ಇಳಿಕೆಯ ಲಕ್ಷಣ, ದಕ್ಷಿಣ ಒಳನಾಡಿನಲ್ಲಿ 10 ದಿನ ಮಳೆ ಸಾಧ್ಯತೆ

Share

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಆದರೆ ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಇನ್ನೂ ಮಳೆ, ಬಳಿಕ ಇಳಿಮುಖ ಸಾಧ್ಯತೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಿನದ ಬಹುತೇಕ ಅವಧಿಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಪ್ರಸ್ತುತ ಕರಾವಳಿಯಲ್ಲಿ ಕಾಣುತ್ತಿರುವ ಮಳೆಯು ಸಮುದ್ರ ತೀರದ ಭಾಗದಲ್ಲಿ ಗಾಳಿಯ ಒತ್ತಡ ಮತ್ತು ಗಾಳಿಯ ಚಲನೆ ಕಡಿಮೆಯಾಗಿರುವುದರಿಂದ ಉಂಟಾಗಿದ್ದು, ಜೂನ್ 14 ಅಥವಾ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ದಿನಕ್ಕೆ ಎರಡು-ಮೂರು ಮಳೆ ಸುರಿಯುವ ಮಟ್ಟಕ್ಕೆ ಸೀಮಿತವಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡಿನಲ್ಲಿ ಜೂನ್ 17ರವರೆಗೆ ಮಳೆ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ಜೂನ್ 17ರವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಮಳೆಯ ಚಟುವಟಿಕೆ ಸ್ವಲ್ಪ ಮಟ್ಟಿಗೆ ಕುಂಠಿತವಾಗಬಹುದು ಎಂದು ಅಂದಾಜಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಚದುರಿದ ಮಳೆ :  ಹಾವೇರಿ, ಗದಗ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ನಂತರ ಮಳೆ ಚಟುವಟಿಕೆ ಕಡಿಮೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಕೆ :  ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಸದ್ಯದ ಹವಾಮಾನ ವಿಶ್ಲೇಷಣೆಯ ಪ್ರಕಾರ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವುದು ಸೂಕ್ತವಾಗಿದೆ.

ರೈತರಿಗೆ ಸಲಹೆ :  ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದುವರಿಯುವ ಮಳೆಯ ಹಿನ್ನೆಲೆಯಲ್ಲಿ ಬಿತ್ತನೆ, ಗೊಬ್ಬರ ನಿರ್ವಹಣೆ ಹಾಗೂ ನೀರು ನಿಲ್ಲುವ ಸಮಸ್ಯೆಗಳ ಬಗ್ಗೆ ರೈತರು ಎಚ್ಚರಿಕೆ ವಹಿಸಬೇಕಿದೆ. ಕರಾವಳಿಯಲ್ಲಿ ಮಳೆ ಸ್ವಲ್ಪ ತಗ್ಗುವ ಲಕ್ಷಣ ಕಂಡುಬರುತ್ತಿರುವುದರಿಂದ ಅಡಿಕೆ, ತೆಂಗು ಹಾಗೂ ತೋಟಗಾರಿಕಾ ಬೆಳೆಗಳ ನಿರ್ವಹಣಾ ಕಾರ್ಯಗಳಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Monsoon conditions continue across Karnataka, with coastal, Malnad and southern interior regions receiving rainfall. While rain is expected to reduce in Dakshina Kannada, Udupi and Kasaragod after June 14-15, southern interior districts may continue to receive rainfall for up to 10 more days.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

2 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

8 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

8 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

19 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

19 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

20 hours ago