Advertisement
ವೆದರ್ ಮಿರರ್

ಹವಾಮಾನ ವರದಿ | 18-02-2026 | ಫೆ.20 ರಂದು ಕರ್ನಾಟಕದಲ್ಲಿ ಮಳೆ ಸಾಧ್ಯತೆ

Share

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮೋಡದ ವಾತಾವರಣದ ಜೊತೆಗೆ ತುಂತುರು ಹಾಗೂ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿ ಚಲಿಸುತ್ತಿರುವ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಳ, ಮಳೆ ಸಾಧ್ಯತೆ :  ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಹಗಲಿನ ಉಷ್ಣಾಂಶ ಹಾಗೂ ತೇವಾಂಶ ಸ್ವಲ್ಪ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆ ಇದೆ. ಫೆಬ್ರವರಿ 20 ರಿಂದ ಈ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ.

ಮಲೆನಾಡಿನಲ್ಲಿ ತುಂತುರು ಮಳೆ ಮುನ್ಸೂಚನೆ :  ಕೊಡಗು ಜಿಲ್ಲೆಯ ಕೆಲವು ಭಾಗಗಳು ಹಾಗೂ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಮೋಡದ ವಾತಾವರಣ ಕಂಡುಬರುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 19 ನಂತರ ಮಲೆನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆ :  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಹಗಲಿನ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬಿಸಿಲಿನ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡದ ವಾತಾವರಣ : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುತ್ತಿದ್ದು, ಫೆಬ್ರವರಿ 20ರಿಂದ ತುಂತುರು ಮಳೆಯಾಗುವ ಸಾಧ್ಯತೆ ಇದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಾಯುಭಾರ ಕುಸಿತದಿಂದ ಮಳೆ :  ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 2–3 ದಿನಗಳಲ್ಲಿ ಉತ್ತರ ಭಾಗದತ್ತ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡದ ವಾತಾವರಣ ಹಾಗೂ ಮಳೆಯಾಗುವ ಲಕ್ಷಣಗಳಿವೆ.

A low-pressure system near Sri Lanka is expected to bring cloudy conditions and light rainfall across coastal, Malnad, and parts of south interior Karnataka from February 20. Coastal districts like Dakshina Kannada and Udupi and Malnad regions including Chikkamagaluru and Shivamogga may receive light showers, while north interior Karnataka is likely to experience rising temperatures without rainfall.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

16 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago